Select Your Language

Notifications

webdunia
webdunia
webdunia
webdunia

ಹೊಸ ಸಿಎಂ ಕ್ಯಾಬಿನೆಟ್ ಎನ್ನುವಾಗಲೇ ಕಾಂಗ್ರೆಸ್ ನಲ್ಲಿ ಶುರುವಾಯ್ತು ಇದಕ್ಕೆ ಹೊಯ್ದಾಟ

DK Shivakumar-Randeep Surjewala
ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಾಯ್ತು, ಹೊಸ ಸಿಎಂ , ಹೊಸ ಕ್ಯಾಬಿನೆಟ್ ರಚನೆಯಾಗಲಿದೆ ಎಂದಾಗಲೇ ಇದೊಂದು  ವಿಚಾರಕ್ಕೆ ಹೊಯ್ದಾಟ ಶುರುವಾಗಿದೆ.

ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಿದ್ದಂತೇ ಡಿಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗುವುದು ಬಹುತೇಕ ಪಕ್ಕಾ ಆಗಿದೆ. ನಾಳೆ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವುದೊಂದೇ ಬಾಕಿಯಿದೆ. ಇದಕ್ಕಾಗಿ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಇದರ ನಡುವೆ ಈಗ ಹೊಸ ಕ್ಯಾಬಿನೆಟ್ ನಲ್ಲಿ ಯಾರಿಗೆಲ್ಲಾ ಮಂತ್ರಿಗಿರಿ ಸಿಗಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ. ಕಾಂಗ್ರೆಸ್ ನಲ್ಲಿ ಸಚಿವ ಆಕಾಂಕ್ಷಿಗಳು ಈಗ ಮಂತ್ರಿಗಿರಿಗಾಗಿ ಲಾಬಿ ನಡೆಸಲು ಶುರು ಮಾಡಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಗಳು ಇಂದು ಬೆಳಿಗ್ಗೆಯೇ ದಂಡು ದಂಡಾಗಿ ದೆಹಲಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿರುವ ಎಲ್ಲಾ ಸಚಿವರಿಗೆ ಮತ್ತೆ ಸ್ಥಾನ ಸಿಗುವ ಸಾಧ್ಯತೆಯಿಲ್ಲ. ಅವಕಾಶ ಸಿಗದವರಿಗೆ ಈ ಬಾರಿ ಅವಕಾಶ ನೀಡುವ ಸಾಧ್ಯತೆಯಿದೆ. ಅಲ್ಲದೆ, ಡಿಕೆಶಿ ಆಪ್ತರಾಗಿರುವ ಕೆಲವು ಶಾಸಕರೂ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ.

ಈಗಾಗಲೇ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ, ಡಾ ಪರಮೇಶ್ವರ್, ಎಚ್ ಕೆ ಪಾಟೀಲ್, ಕೃಷ್ಣಭೈರೇಗೌಡ, ದಿನೇಶ್ ಗುಂಡೂರಾವ್, ಕೆಜೆ ಜಾರ್ಜ್, ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಸಂತೋಷ್ ಲಾಡ್, ಶಿವರಾಜ್ ತಂಗಡಗಿ ಮಂತ್ರಿಗಿರಿ ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಇದರ ಹೊರತಾಗಿ ಡಿಕೆಶಿ ಆಪ್ತರೂ ಸಂಪುಟ ಸೇರ್ಪಡೆಯಾಗುವ ಸಾಧ್ಯತೆಯಿದೆ. ಇದಕ್ಕಾಗಿ ಈಗ ದೆಹಲಿಯಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಇದೇ ಕಾರಣಕ್ಕೆ ಆಕಾಂಕ್ಷಿಗಳು ದೆಹಲಿಗೇ ಹೋಗಿ ಲಾಬಿ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇದ್ದಕ್ಕಿದ್ದಂತೆ ಮನೆಯ ಎಸಿ ಸ್ಫೋಟ: ಮಾಜಿ ದಕ್ಷ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ ದಾರುಣ ಸಾವು