Select Your Language

Notifications

webdunia
webdunia
webdunia
webdunia

ಬಂಡಾಯ ಶಮನಕ್ಕೆ ಕಾಂಗ್ರೆಸ್ ಹೊಸ ಸೂತ್ರ

ಬಂಡಾಯ ಶಮನಕ್ಕೆ ಕಾಂಗ್ರೆಸ್ ಹೊಸ ಸೂತ್ರ
ಬೆಂಗಳೂರು , ಶನಿವಾರ, 9 ಜೂನ್ 2018 (11:14 IST)
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಉಂಟಾದ ಭಿನ್ನಮತ ಶಮನಕ್ಕೆ ಕಾಂಗ್ರೆಸ್ ಹೊಸದೊಂದು ಸೂತ್ರ ಕಂಡುಕೊಂಡಿದೆ ಎಂದು ಡಿಸಿಎಂ ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗ ನೇಮಕವಾದ ಸಚಿವರು 2 ವರ್ಷಷಗಳ ಕಾಲ ಸಚಿವರಾಗಿರುತ್ತಾರೆ. ಅವರ ಸಾಧನೆ ಗಮನಿಸಿಕೊಂಡು ಮುಂದುವರಿಸಲಾಗುತ್ತದೆ. ಸದ್ಯದಲ್ಲೇ ನೂತನವಾಗಿ ಆರು ಸಚಿವರ ಸೇರ್ಪಡೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಎರಡು ವರ್ಷಗಳ ಅವಧಿಗೆ ಸಚಿವರನ್ನು ನೇಮಕ ಮಾಡಲಾಗುತ್ತದೆ. ಈ ಬದಲಾವಣೆಗೆ ರಾಹುಲ್ ಗಾಂಧಿಯವರೇ ಸೂಚಿಸಿದ್ದಾರೆ. ಹೀಗಾಗಿ ಸದ್ಯಕ್ಕೆ ನಾನು ದೆಹಲಿಗೆ ಹೋಗುತ್ತಿಲ್ಲ. ಯಾರೂ ಅಸಮಾಧಾನಗೊಳ್ಳಬೇಕಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಶಾಲೆಗಳಿಗೆ ರಜೆ!