ಆರ್ ಎಸ್ ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್ ಗೆ ಇಲ್ಲ: ಮುರುಗೇಶ್ ನಿರಾಣಿ

Webdunia
ಮಂಗಳವಾರ, 7 ಜೂನ್ 2022 (21:49 IST)

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್ ಗೆ ಇಲ್ಲ, ಆರ್ ಎಸ್ ಎಸ್ ನವರು ನಿಸ್ವಾರ್ಥದಿಂದ ಸೇವೆ ಮಾಡುವರು. ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಬೆಳಗಾವಿಯಲ್ಲಿ ಸಚಿವ ಮುರಗೇಶ ನಿರಾಣಿ ತಿರುಗೇಟು ನೀಡಿದ್ದಾರೆ.

ಆರ್ ಎಸ್ ಎಸ್ ನವರು ಅಧಿಕಾರಕ್ಕಾಗಿ ಎಂಎಲ್ ಆಗಬೇಕು, ಎಂಪಿ ಆಗಬೇಕು ಅಂತಾ ಸಿಎಂ ಆಗುವ ಕನಸು ಕಂಡವರಲ್ಲ. ಎಲ್ಲಿ,ಯಾರಿಗೆ ಅನ್ಯಾಯ ನಡೆಯುತ್ತದೆಯೋ, ಯಾವಾಗ ಸಾರ್ವಜನಿಕರು ಕಷ್ಟದಲ್ಲಿ ಇರ್ತಾರೋ ಅಲ್ಲಿ ಗಟ್ಟಿಯಾಗಿ ನಿಂತು ಕೆಲಸ ಮಾಡಿದ್ದಾರೆ. ಅಲ್ಲದೆ ಪ್ಲಡ್ ಬಂದಾಗ ಮನೆ ಮಠ ಬಿಟ್ಟು ಆರ್ ಎಸ್ ಎಸ್ ಕಷ್ಟ ಪಟ್ಟು ಕೆಲಸ ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಬೆಳಗಾವಿಯಲ್ಲಿ ಸಚಿವ ಮುರಗೇಶ ನಿರಾಣಿ ಟಾಂಗ್ ಕೊಟ್ಟಿದ್ದಾರೆ.

ಇದೇ ವೇಳೆ ಬಿಜೆಪಿ ಆರ್ ಎಸ್ ಎಸ್ ಕೈಗೊಂಬೆಯಾಗಿದೆ ಅಂತಾ ಕಾಂಗ್ರೆಸ್ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ನಮ್ಮ ಕುಟುಂಬದಲ್ಲಿ ನಮ್ಮ ತಾಯಿ ತಂದೆ ಮಾತು ಕೇಳುತ್ತಿದ್ದೇವೆ. ಅದು ಕೈ ಗೊಂಬೆ ಅಂತಾ ಅಲ್ಲ ಅದು ನಮ್ಮ ಕರ್ತವ್ಯ.ಆರ್ ಎಸ್ ಎಸ್ ಅಂದ್ರೆ ಅವರನ್ನು ತಾಯಿ ಸ್ಥಾನದಲ್ಲಿ ನೋಡುತ್ತೇವೆ ಎಂದು ಹೇಳಿದ್ರು.

ರಾಜ್ಯದಲ್ಲಿ ಚಡ್ಡಿವಾರ್ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಇರಬಹುದು, ಡಿಕೆಶಿ ಇರಬಹುದು. ಯಾರೇ ಕಾಂಗ್ರೆಸ್ ನವರು ಚಡ್ಡಿ ಬಗ್ಗೆ ಮಾತಾಡೋದು ಸೂಕ್ತ ಅಲ್ಲ ಎಂದ್ರು. ರಾಜ್ಯದ ಅಭಿವೃದ್ಧಿ ಮಾಡುವ ವಿಚಾರದಲ್ಲಿ ಸಿದ್ದರಾಮಯ್ಯ ಅಳಿಲು ಸೇವೆ ಇದೆ. ಅವರು ಮಾಡುವ ಕೆಲಸ ಇನ್ನೂ ಸಾಕಷ್ಟು ಇದೆ, ಅದರ ಕಡೆ ಗಮನ ಕೊಡಲಿ, ಆರ್ ಎಸ್ ಎಸ್ ನವರ ಬಗ್ಗೆ ಆಳವಾಗಿ ಅಭ್ಯಾಸ ಮಾಡಿದ್ರೆ ಅವರ ಮನ ಪರಿವರ್ತನೆ ಆಗುತ್ತದೆ ಎಂದ್ರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಂಡಿಗೆ ಗಟ್ಟಿ ಮಾಡಿಕೊಳ್ಳಿ.. ಎದೆ ಝಲ್ಲೆನಿಸುವಂತಿದೆ ಈ ಅಪಘಾತದ ವಿಡಿಯೋ Video

ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುತ್ತಿರುವ ಬಗ್ಗೆ ಫೋಟೋ, ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ

ಮಸೀದಿ ಒಳಗೆ ಎಸ್ಐಆರ್ ನಡೆಸಲಾಗ್ತಿದೆ: ಬಿವೈ ವಿಜಯೇಂದ್ರ ಗಂಭೀರ ಆರೋಪ

ಹೀಗೂ ರಾಜೀನಾಮೆ ಪತ್ರ ಬರೀತಾರಾ.. ಮಹಿಳೆ ಬರೆದ ರಾಜೀನಾಮೆ ಪತ್ರ ನೋಡಿದ್ರೆ ಶಾಕ್ ಆಗ್ತೀರಾ

ಫೋಟೋ ತೆಗೆಯುವಾಗ ಯುವತಿಯ ಸೆರಗು ಜಾರಿತ್ತು... ಯುವಕ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಮುಂದಿನ ಸುದ್ದಿ
Show comments