ಮೇಕೆದಾಟು ಪಾದಯಾತ್ರೆಗೆ ಕೊರೊನಾ ಬ್ರೇಕ್

Webdunia
ಭಾನುವಾರ, 2 ಜನವರಿ 2022 (14:21 IST)
ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ಆಯೋಜಿಸಲಾಗಿರುವ ಪಾದಯಾತ್ರೆ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಜನವರಿ 4 ರಂದು ಹಿರಿಯ ನಾಯಕರ ಸಭೆ ನಡೆಸಲಿದೆ.
ಪಾದಯಾತ್ರೆ ಹಿನ್ನೆಲೆಯಲ್ಲಿ ವಸತಿ, ಊಟೋಪಚಾರ, ಪ್ರಚಾರ ಹಾಗೂ ಸಾರ್ವಜನಿಕ ಸಭೆಗಳ ಆಯೋಜನೆಗೆ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದೆ.
 
ಆ ಸಮಿತಿಗಳ ಪದಾಧಿಕಾರಿಗಳು ಹಾಗೂ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪಾದಯಾತ್ರೆಯಿಂದ ಉಂಟಾಗಬಹುದಾದ ರಾಜಕೀಯ ಪರಿಣಾಮಗಳ ಕುರಿತು ಬಿಜೆಪಿ ಮತ್ತು ಜೆಡಿಎಸ್‍ನಲ್ಲಿ ಈಗಾಗಲೇ ದುಗುಡ ಆರಂಭವಾಗಿದ್ದು, ಟೀಕೆ, ಟಿಪ್ಪಣಿಗಳು ವ್ಯಾಪಕವಾಗಿ ಕೇಳಿ ಬಂದಿವೆ.
 
ಕೊರೊನಾ ಹೆಚ್ಚಳವನ್ನೇ ನೆಪ ಮಾಡಿಕೊಂಡು ಲಾಕ್‍ಡೌನ್ ಸೇರಿದಂತೆ ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸುವ ಮೂಲಕ ಸರ್ಕಾರ ಪಾದಯಾತ್ರೆಗೆ ಅಡ್ಡಿ ಪಡಿಸುವ ಆತಂಕವೂ ಕಾಂಗ್ರೆಸ್ ಪಾಳೆಯವನ್ನು ಕಾಡುತ್ತಿದೆ. ಪಾದಯಾತ್ರೆ ದಿನಾಂಕ ಘೋಷಿಸಿದ ಕ್ಷಣದಿಂದ ಪಕ್ಷದ ಒಳವಲಯದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಈವರೆಗೂ ಸುಮಾರು 4 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲಿ ಅರ್ಧದಷ್ಟು ಜನ ಭಾಗವಹಿಸಿದ್ದರೂ ಎರಡು ಸಾವಿರಕ್ಕೂ ಹೆಚ್ಚು ಮಂದಿ ನಿತ್ಯದ ಕಾಲ್ನಡಿಗೆ ಜಾಥದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣ್ಣು ನೀಡಿ ಹಸಿವು ನೀಗಿಸುತ್ತಿದ್ದ ಅಜ್ಜಿ ಇನ್ನಿಲ್ಲ ಎಂದಾಗ ಕೋತಿ ನಡೆಸಿಕೊಂಡ ರೀತಿಗೆ ಕಣ್ಣೀರು ಬರುತ್ತೆ

ಶಾಸಕ ಪ್ರದೀಪ್ ಈಶ್ವರ್ ನಾಲಿಗೆಗೆ ಕಡಿವಾಣ ಹಾಕಲು ಹೇಳಿ: ಬಿಜೆಪಿ ದೂರು

ಅಸ್ಸಾಂನಲ್ಲಿ ಚಹಾ ಎಲೆ ಕಿತ್ತ ಪ್ರಧಾನಿ ಮೋದಿ, ಕಾರ್ಮಿಕರೊಂದಿಗೆ ಸೆಲ್ಫೀ: Video

ಗಾಯದ ಮೇಲೆ ಮತ್ತೆ ಬರೆ: ದ್ವಿಗುಣವಾದ ವಿಮಾನ ಇಂಧನ ದರ, ವಾಣಿಜ್ಯ ಸಿಲಿಂಡರ್‌ ಕೂಡ ತುಟ್ಟಿ

ಈ ಸರಕಾರ ಅಭಿವೃದ್ಧಿಶೂನ್ಯವಾಗಿದೆ ಎಂದು ಜನರು ಮಾತನಾಡುತ್ತಿದ್ದಾರೆ: ಅರವಿಂದ ಲಿಂಬಾವಳಿ

ಮುಂದಿನ ಸುದ್ದಿ
Show comments