Webdunia - Bharat's app for daily news and videos

Install App

ಕಾಂಗ್ರೆಸ್ ಪಾದಯಾತ್ರೆ ಸ್ಥಗಿತ

Webdunia
ಗುರುವಾರ, 13 ಜನವರಿ 2022 (14:11 IST)
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಕಾಂಗ್ರೆಸ್ ನಾಯಕರು ಕಳೆದ ಐದು ದಿನಗಳಿಂದ ಆರಂಭಿಸಿದ್ದ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.
ರಾಮನಗರದಿಂದ ಇಂದು ಬೆಳಗ್ಗೆ 8.30ರಿಂದ ಪಾದಯಾತ್ರೆ ಆರಂಭವಾಗಬೇಕಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್‍ನ ಸೂಚನೆ, ಪೊಲೀಸರ ಅಡ್ಡಿ, ನ್ಯಾಯಾಲಯದ ವಿಚಾರಣೆ, ಹಲವು ಅನುಮತಿಗಳು ರದ್ದುಗೊಂಡಿದ್ದರಿಂದ ಪಾದಯಾತ್ರೆ ಹಿಂದೆ ತೆಗೆದುಕೊಳ್ಳಲಾಗಿದೆ.
 
ಇದಕ್ಕೂ ಮುನ್ನಾ ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ದ್ರವನಾರಾಯಣ್, ಮುಖಂಡರಾದ ರಮೇಶ್ ಕುಮಾರ್, ಕೆ.ಎಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್, ಚಲುವರಾಯಸ್ವಾಮಿ ಮತ್ತಿತರ ನೇತೃತ್ವದಲ್ಲಿ ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದೀರ್ಘ ಸಮಾಲೋಚನೆ ನಡೆಯಿತು. ಸಭೆಯಲ್ಲಿ ಪರಿಸ್ಥಿತಿಯ ಬಗ್ಗೆ ಬೇರೆ ಬೇರೆ ಅಭಿಪ್ರಾಯಗಳು ಕೇಳಿ ಬಂದವು. ಆದರೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಮೊಟಕುಗೊಳಿಸುವುದು ಸೂಕ್ತ, ಮೂರನೆ ಅಲೆ ತಗ್ಗಿದ ಬಳಿಕ ಮತ್ತೆ ರಾಮನಗರದಿಂದಲೇ
ನೀರಿಗಾಗಿ ನಡಿಗೆ ಆರಂಭಿಸಲು ನಿರ್ಧರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments