Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷ ಸರ್ಕಾರದ ಆಸ್ತಿ ಮಾರಾಟ ಮಾಡಿ ಅಡವಿಡಲು ಹೊರಟಿದೆ: ಸಿ.ಟಿ.ರವಿ ಟೀಕೆ

Sampriya
ಮಂಗಳವಾರ, 18 ಜೂನ್ 2024 (19:46 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆ ಮಾಡಿದ್ದು ಸಾಕಾಗಿಲ್ಲ ಎಂದು ಇದ್ದೆಲ್ಲ ಆಸ್ತಿಗಳ ಮಾರಾಟ, ಅಡವಿಡಲು ಹೊರಟಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆಕ್ಷೇಪಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ  ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಭವಿಷ್ಯದ ಹಲವು ಯೋಜನೆಗಳಿಗೆ ಬಳಕೆ ಮಾಡಲು ಉದ್ದೇಶಿಸಿದ ಸಂರಕ್ಷಿತ ಸರಕಾರಿ ಭೂಮಿಯನ್ನು ಇವತ್ತಿನ ತಾತ್ಕಾಲಿಕ ಕೊರತೆ ತುಂಬಿಸಿಕೊಳ್ಳಲು ಮಾರಾಟ ಮಾಡುವುದು, ಲೀಸ್ ಕೊಡುವ ಹುನ್ನಾರವನ್ನು ಮಾಡುತ್ತಿದೆ. ಇದರ ಹಿಂದೆ ದೊಡ್ಡ ಸಂಚು ಇದ್ದಂತೆ ಭಾಸವಾಗುತ್ತಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಬಹುತೇಕ ಸಚಿವರು ರಿಯಲ್ ಎಸ್ಟೇಟ್ ಜೊತೆ ಸಂಬಂಧ ಹೊಂದಿರುವುದು ಗೊತ್ತಿರುವ ಸಂಗತಿ. ಅವರಿಗೆ ಈ ಭೂಮಿ ಕೊಡುವ ಸಂಚು ನಡೆದಿರುವ ಸಾಧ್ಯತೆ ಇದೆ ಎಂದ ಅವರು, ಮುಖ್ಯಮಂತ್ರಿಗಳ ಹೇಳಿಕೆಯಂತೆ ಕಾಂಗ್ರೆಸ್ ಸರಕಾರದ ಖಜಾನೆ ಭರ್ತಿ ಇದ್ದÀ ಮೇಲೆ ಒಂದು ಕಡೆ ಬೆಲೆ ಏರಿಕೆ, ಇನ್ನೊಂದು ಕಡೆ ಸರಕಾರಿ ಭೂಮಿ ಮಾರಾಟ ಮಾಡುವ ಸಂಚು ಯಾಕೆ ಎಂದು ಪ್ರಶ್ನಿಸಿದರು.

ನಿಮ್ಮನ್ನು ನೋಡಿದ ಮೇಲೆ ಸೋಮಪ್ಪ ಸಾಕಿದ ಕೋಳಿ ದಿನವೂ ಚಿನ್ನದ ಮೊಟ್ಟೆ ಇಡುತ್ತಿದ್ದ ಕಥೆ ನೆನಪಾಗುತ್ತದೆ. ದಿನಕ್ಕೊಂದೇ ಮೊಟ್ಟೆ ಇಡುವ ಕೋಳಿಯ ಹೊಟ್ಟೆ ಬಗೆದರೆ ಎಲ್ಲ ಮೊಟ್ಟೆ ಸಿಕ್ಕಿದರೆ, ಒಂದೇ ಸಾರಿ ನಾವು ಸಾಹುಕಾರ ಆಗಬಹುದೆಂಬ ಯೋಚನೆ ಬಂತಂತೆ. ಹೊಟ್ಟೆ ಬಗೆದು ನೋಡಿದರೆ ಮೊಟ್ಟೆಗಳೂ ಇಲ್ಲ; ಕೋಳಿಯೂ ಇಲ್ಲ. ಈ ಕಾಂಗ್ರೆಸ್ಸಿನ ದುರಾಸೆಯಿಂದ ರಾಜ್ಯವೇ ದಿವಾಳಿ ಆಗುವ ಅಪಾಯದ ಸ್ಥಿತಿಗೆ ಬಂದು ತಲುಪಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಎಲ್ಲವನ್ನೂ ಮಾರಿ, ಗುಡಿಸಿ ಗುಂಡಾಂತರ ಮಾಡಿ ಹೋಗಬೇಕೆನ್ನುವ ಮನಸ್ಥಿತಿಯಲ್ಲಿ ಇವತ್ತಿನ ಕಾಂಗ್ರೆಸ್ ಸರಕಾರ ಇದೆ. ಇವರನ್ನು ನೋಡಿದರೆ ಈ ರಾಜ್ಯವನ್ನು ಉಳಿಸುವರೆಂದು ಅನಿಸುವುದಿಲ್ಲ ಎಂದು ತಿಳಿಸಿದರು. ಆಸ್ತಿ ಮಾರಾಟ ಮಾಡಿ ಗುಡಿಸಿ ಗುಂಡಾಂತರ ಮಾಡಲು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments