Webdunia - Bharat's app for daily news and videos

Install App

ಕಾಂಗ್ರೆಸ್‌ ಪಕ್ಷ ಜನರನ್ನ ಬೆದರಿಸಿ ಮರ್ಯಾದೆ ಕಳೆಯುತ್ತಿದೆ- ಬಿ.ವೈ. ವಿಜಯೇಂದ್ರ

geetha
ಬುಧವಾರ, 31 ಜನವರಿ 2024 (19:48 IST)
ಬೆಂಗಳೂರು :ಮೋದಿಯವರ ಅಭಿವೃದ್ಧಿ ಕಾರ್ಯ, ಶ್ರೀರಾಮನ  ಜೈಕಾರ, ಕೇಸರಿಯ ವಿಸ್ತಾರ ಕಾಂಗ್ರೆಸ್ಸಿಗರನ್ನು ಕಂಗೆಡಿಸಿದೆ, ಅಖಾಡಕ್ಕೆ ಬರುವ ಮುನ್ನವೇ  ಸೋಲೊಪ್ಪಿಕೊಳ್ಳುವಂತೆ ಮಾಡಿದೆ". ಓಟಿಗಾಗಿ ನೋಟು ಎನ್ನುತ್ತಿದ್ದ ಕಾಂಗ್ರೆಸ್ಸಿಗರು ಕಳೆದ ಚುನಾವಣೆಯಲ್ಲಿ ಓಟಿಗಾಗಿ ಬಿಟ್ಟಿ ಗ್ಯಾರಂಟಿ ಎಂದರು, ಇದೀಗ ಓಟು ಕೊಡದಿದ್ದರೆ ಗ್ಯಾರಂಟಿ ನಿಲ್ಲಿಸುವ ಏಟು ಕೊಡುವುದಾಗಿ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ, ಏಟಿಗೆ ಎದಿರೇಟು ಕೊಡುವ ತಾಕತ್ತು ನಮ್ಮ ಮತದಾರರಿಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. 
 
 ಪ್ರಬುದ್ಧತೆಗೆ ಹೆಸರಾದ ನಮ್ಮ ಕರ್ನಾಟಕದ ಮತದಾರರನ್ನುಆಮಿಷಗಳಿಗೆ ಬಲಿಯಾಗುವ ದುರ್ಬಲ ಮನಸ್ಸಿನವರು ಎಂದು ಭಾವಿಸಿರುವ ಕಾಂಗ್ರೆಸ್ ತಮ್ಮ ಶಾಸಕರೊಬ್ಬರ ಮೂಲಕ ಮತದಾರರನ್ನು ಬಿಕ್ಷುಕರಂತೆ ಬೆದರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಪಮಾನಿಸುವ ಹೇಳಿಕೆ ಕೊಡಿಸಿರುವುದು ಅಕ್ಷಮ್ಯ ಅಪರಾಧ. ಈ ಕೂಡಲೇ ಕಾಂಗ್ರೆಸ್ ಜನರ ಬಳಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ. 

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತರೆ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಬಹುದು ಎಂದು ಮಾಗಡಿಯ ಕಾಂಗ್ರೆಸ ಶಾಸಕ ಎಚ್‌.ಸಿ ಬಾಲಕೃಷ್ಣ ನೀಡಿರುವ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಮೈಕ್ರೋಬ್ಲಾಗಿಂಗ್‌ ವೇದಿಕೆ ಎಕ್ಸ್‌ ಮೂಲಕ ಪ್ರತಿಕ್ರಿಯಿಸಿರುವ ವಿಜಯೇಂದ್ರ ಅವರು, ಕಾಂಗ್ರೆಸ್‌ ಪಕ್ಷವು ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಲು ಸಾಧ್ಯವಾಗದೇ ಪರದಾಡುತ್ತಿದೆ. ಈ  ನಡುವೆ ಫಲಾನುಭವಿ ಜನರನ್ನು ಹಂಗಿಸಿ ಬೆದರಿಸಿ ಕರ್ನಾಟಕದ ಮಾನ ಕಳೆಯುತ್ತಿದೆ ಎಂದು ಟೀಕಿಸಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments