ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಹತ್ತು ವರ್ಷಗಳಲ್ಲಿ ನೀಡಿದ ದುರಾಡಳಿತದಿಂದ ಕೆಲ ರಾಜ್ಯಗಳಲ್ಲಿ ಅಸ್ತಿತ್ವ ಕಳೆದುಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತುಂಬಾ ಒಳ್ಳೆಯ ಪ್ರಧಾನಿ. ಆದರೆ, ಅವರ ಕೆಲ ನಿರ್ಧಾರಗಳು ಸರಿಯಾಗಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕೂಡಾ ಉತ್ತಮ ಮಾತುಗಾರರೇ.ಆದರೆ ಇಬ್ಬರ ಮಾತಿನಲ್ಲೂ ವ್ಯತ್ಯಾಸವಿದೆ ಎಂದು ತಿಳಿಸಿದ್ದಾರೆ.
ರಾಜ್ಯದಾದ್ಯಂತ ಪ್ರವಾಸ ಮಾಡಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಿ, ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದೇ ನಮ್ಮ ಉದ್ದೇಶವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.