Webdunia - Bharat's app for daily news and videos

Install App

ರಾಜ್ಯವನ್ನು ಲೂಟಿ ಮಾಡಿರುವುದೇ ಕಾಂಗ್ರೆಸ್ ಪಕ್ಷದ ಸಾಧನೆ: ಕುಮಾರಸ್ವಾಮಿ

Webdunia
ಮಂಗಳವಾರ, 1 ಆಗಸ್ಟ್ 2017 (18:23 IST)
ನಮ್ಮದು ನುಡಿದಂತೆ ನಡೆದ ಸರಕಾರ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ನುಡಿದಂತೆ ಏನು ನಡೆದುಕೊಂಡಿದ್ದಾರೆ ಎನ್ನುವುದನ್ನು ದುರ್ಬಿನ್ ಹಿಡಿದು ಹುಡುಕುತ್ತಿದ್ದೇನೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
 
ಜಾಹಿರಾತಿಗೆ ಬಳಸಿದ್ದ ಹಣ ಯೋಜನೆಗಳಿಗೆ ಬಳಸಬಹುದಿತ್ತು. ಹಾಗೆ ಮಾಡಿದ್ರೆ ಸರಕಾರ ಜನರ ವಿಶ್ವಾಸ ಗಳಿಸಬಹುದಿತ್ತು. ಯೋಜನೆಗಳ ಹೆಸರಲ್ಲಿ ಲೂಟಿ ಮಾಡಿರುವುದೇ ಕಾಂಗ್ರೆಸ್ ಪಕ್ಷದ ಸಾಧನೆಯಾಗಿದೆ ಎಂದು ಆರೋಪಿಸಿದರು.
 
ಅಂಬೇಡ್ಕರ್ ಹೆಸರಲ್ಲಿ ನಾಲ್ಕು ದಿನ ಸಮಾವೇಶ ಮಾಡಿದರು. ಅಂತಾರಾಷ್ಟ್ರೀಯ ಸಮಾವೇಶದ ಹೆಸರಲ್ಲಿ 24 ಕೋಟಿ ವೆಚ್ಚ ಮಾಡಿದರು. ಕೇವಲ ಅನಗತ್ಯ ವೆಚ್ಚಗಳಿಗೆ ಕೈಹಾಕಿರುವುದಕ್ಕೆ ಸರಕಾರಕ್ಕೆ ನಾಚಿಕೆಯಾಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. 
 
ವೀರಶೈವ ಮತ್ತು ಲಿಂಗಾಯುತರಲ್ಲಿ ಸ್ವಾಮಿಜಿಗಳಿದ್ದಾರೆ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆ. ಅದರಲ್ಲಿ ನಿಮಗೇನು ಕೆಲಸ ಸಿದ್ದರಾಮಯ್ಯನವರೇ? ಬೆಂಕಿ ಹಚ್ಚಿ ಕುಳಿತಿದ್ದೀರಿ? ಅದು ಬೇರೆಯವರನ್ನು ಸುಡುವ ಮೊದಲು ನಿಮ್ಮ ಪಕ್ಷವನ್ನೇ ಸುಡುತ್ತದೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಭಾಗಗಳಿಗೆ ಮಳೆ ನಿರೀಕ್ಷೆಯೇ ಬೇಡ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments