Webdunia - Bharat's app for daily news and videos

Install App

ನಾಚಿಕೆಯಾಗಬೇಕು ಕಾಂಗ್ರೆಸ್ ಪಕ್ಷದ ನೀಚತನಕ್ಕೆ, ಕೀಳು ಮನಸ್ಥಿತಿಗೆ: ಅಶೋಕ್ ಕಿಡಿ

Sampriya
ಶುಕ್ರವಾರ, 3 ಜನವರಿ 2025 (20:33 IST)
Photo Courtesy X
ಬೆಂಗಳೂರು: ವಿಡಿಯೋಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಕಟ್ ಮಾಡಿ, ಎಡಿಟ್ ಮಾಡಿ ವಿರೋಧ ಪಕ್ಷಗಳ ತೇಜೋವಧೆ ಮಾಡವುದು, ಸುಳ್ಳು ಸುದ್ದಿ ಹರಡುವುದು ಕಾಂಗ್ರೆಸ್ ಪಕ್ಷಕ್ಕೆ ಚೆನ್ನಾಗಿ ಕರಗತವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಕಿಡಿಕಾರಿದ್ದಾರೆ.

ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಏರಿಕೆ ವಿರುದ್ಧ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಆರ್‌ ಅಶೋಕ್ ವರು ಪೊಲೀಸ್ ಅಧಿಕಾರಿಗಳ ಮೇಲೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಅಶೋಕ್ ಅವರ ಪೊಲೀಸ್ ಜತೆಗಿನ ವಾಗ್ವಾದದ ವಿಡಿಯೋ ಹಂಚಿಕೊಂಡು ಪೋಸ್ಟ್ ಮಾಡಿರುವ ಕಾಂಗ್ರೆಸ್‌, ಅಶೋಕ್ ತನ್ನ ನಾಲಗೆ ಹರಿಬಿಟ್ಟು ಸ್ತ್ರೀ ಕುಲವನ್ನು ಅಪಮಾನಿಸಿದ್ದಾರೆಂದು ಆರೋಪಿಸಿದೆ.

ಈ ಸಂಬಂಧ ಎಕ್ಸ್‌ನಲ್ಲಿ ಬರೆದುಕೊಂಡು ಕೌಂಟರ್ ನೀಡಿದ ಅಶೋಕ್ ಅವರು, ವಿಡಿಯೋಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಕಟ್ ಮಾಡಿ, ಎಡಿಟ್ ಮಾಡಿ ವಿರೋಧ ಪಕ್ಷಗಳ ತೇಜೋವಧೆ ಮಾಡವುದು, ಸುಳ್ಳು ಸುದ್ದಿ ಹರಡುವುದು ಕಾಂಗ್ರೆಸ್ ಪಕ್ಷಕ್ಕೆ ಚೆನ್ನಾಗಿ ಕರಗತವಾಗಿದೆ ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ.

ಕಾಮಾಲೆ ಕಣ್ಣಿನವನಿಗೆ ಜಗತ್ತೆಲ್ಲ ಹಳದಿ ಎಂಬಂತೆ ಟೂಲ್ ಕಿಟ್ ನಲ್ಲಿ ನಿಸ್ಸೀಮರಾಗಿರುವ ಕಾಂಗ್ರೆಸ್ ಪಕ್ಷದವರಿಗೆ ಎಲ್ಲದರಲ್ಲೂ ಟೂಲ್ ಕಿಟ್ ಕಾಣುತ್ತದೆ. ನಾಚಿಕೆಯಾಗಬೇಕು ಕಾಂಗ್ರೆಸ್ ಪಕ್ಷದ ನೀಚತನಕ್ಕೆ, ಕೀಳು ಮನಸ್ಥಿತಿಗೆ ಎಂದು ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ