Select Your Language

Notifications

webdunia
webdunia
webdunia
webdunia

ಪೇಜಾವರ ಶ್ರೀಗಳಿಗೆ ಕಾಂಗ್ರೆಸ್ ಬೆಂಬಲ: ಜಿ.ಪರಮೇಶ್ವರ್

ಪೇಜಾವರ ಶ್ರೀಗಳಿಗೆ ಕಾಂಗ್ರೆಸ್ ಬೆಂಬಲ: ಜಿ.ಪರಮೇಶ್ವರ್
ಬೆಂಗಳೂರು , ಬುಧವಾರ, 28 ಜೂನ್ 2017 (13:08 IST)
ಉಡುಪಿಯ ಶ್ರೀಕೃಷ್ಣಮಠದಲ್ಲಿ ಮುಸ್ಲಿಂ ಸಮುದಾಯದವರಿಗೆ ಇಫ್ತಾರ್‌ಕೂಟ ಏರ್ಪಡಿಸಿರುವ ಪೇಜಾವರ ಶ್ರೀಗಳ ಕಾರ್ಯ ಶ್ಲಾಘನೀಯ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಕೋಮುಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ ಶ್ರೀಗಳು ಮಠಧಲ್ಲಿ ಇಫ್ತಾರ್‌ಕೂಟ ಏರ್ಪಡಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಬೆಂಬಲ ನೀಡಿದೆ ಎಂದು ತಿಳಿಸಿದ್ದಾರೆ.
 
ಸಮುದಾಯಗಳ ಮಧ್ಯೆ ಬಿಕ್ಕಟ್ಟು ಸೃಷ್ಟಿಸಲು ಕೋಮುವಾದಿಗಳು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಕೋಮುಸೌಹಾರ್ದತೆಯನ್ನು ಕಾಪಾಡುವಲ್ಲಿ ಶ್ರೀಗಳು ಶ್ರಮಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
 
ಪೇಜಾವರ ಶ್ರೀಗಳ ವಿರುದ್ಧ ಪ್ರಮೋದ್ ಮುತಾಲಿಕ್ ನೇತೃತ್ವದ ಶ್ರೀರಾಮಸೇನೆ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಂಸತ್ತಿನಲ್ಲಿ ನೆರೆದ ವಿಪಕ್ಷಗಳ ದಂಡು