ವಿಧಾನ ಪರಿಷತ್ ಚುನಾವಣೆಗೆ ಪರ ರಾಜ್ಯದ ವ್ಯಕ್ತಿಯನ್ನು ಆಯ್ಕೆ ಮಾಡುವ ದುರ್ದೈವ ಕಾಂಗ್ರೆಸ್ ಪಕ್ಷಕ್ಕೆ ಬಂದಿಲ್ಲವೆಂದು ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಉಮಾಶ್ರೀ ಹೇಳಿದ್ದಾರೆ.
ಕೆಪಿಸಿಸಿ ಕಛೇರಿಗೆ ಭೇಟಿ ನೀಡಿದ ಸಚಿವ ಉಮಾಶ್ರೀ, ವಿಧಾನ ಪರಿಷತ್ ಚುನಾವಣೆಗೆ ಪರರಾಜ್ಯದ ವ್ಯಕ್ತಿಯ ಹೆಸರನ್ನು ಶಿಫಾರಸ್ಸು ಮಾಡುವ ದುರ್ದೈವ ಕಾಂಗ್ರೆಸ್ ಪಕ್ಷಕ್ಕೆ ಬಂದಿಲ್ಲ. ಬಿಜೆಪಿ ಪಕ್ಷದಲ್ಲಿ ಒಬ್ಬರದೆ ಹೆಸರು ಹಲವು ವರ್ಷಗಳಿಂದ ಓಡುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷದ ಪಟ್ಟಿಯಲ್ಲಿ ಪಿ.ಚಿದಂಬರಂ ಅವರ ಹೆಸರು ಓಡುತ್ತಿದೆ ಅಷ್ಟೇ. ಈ ಕುರಿತು ಪಕ್ಷದಲ್ಲಿ ಚರ್ಚೆಯಾಗಬೇಕು. ಕಾಂಗ್ರೆಸ್ ಪಕ್ಷದಲ್ಲಿ ನುರಿತ ಮಹಿಳಾ ಅಭ್ಯರ್ಥಿಗಳಿದ್ದಾರೆ. ಅವರಿಗೂ ಸ್ಥಾನಮಾನ ನೀಡಲಿ ಎಂದು ಒತ್ತಾಯಿಸಿದ್ದಾರೆ.
ಖಾಸಗಿ ಶಾಲೆಗಳು ವೇಶ್ಯಾವಾಟಿಕೆ ಅಡ್ಡಿಗಿಂತಲೂ ಕಡೆ ಎಂದು ಸಚಿವ ಎಚ್. ಆಂಜನೇಯ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವೆ ಉಮಾಶ್ರೀ, ಸಮಾಜ ಕಲ್ಯಾಣ ಇಲಾಖೆ ಸಚಿವರ ಅಭಿಪ್ರಾಯ ಸರಿಯಾಗಿದೆ. ಆದರೆ, ಅವರು ಬಳಕೆ ಮಾಡಿರುವ ಪದ ಸರಿಯಾಗಿಲ್ಲ. ಶಿಕ್ಷಣ ಸಂಸ್ಥೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು. ಸಚಿವರು ಸಹ ಮನುಷ್ಯರೇ, ಅವರು ನೀಡಿರುವ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ವೆಬ್ದುನಿಯಾ ಮೊಬೈಲ್ ಆಪ್ (ಡೌನ್ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.