Webdunia - Bharat's app for daily news and videos

Install App

ನಂದಿನಿ ವಿಷಯದಲ್ಲಿ ರೋಗಿಷ್ಠ ಮನಸ್ಥಿತಿ ಹೊಂದಿದ ಕಾಂಗ್ರೆಸ್ ಪಕ್ಷ: ಎನ್.ರವಿಕುಮಾರ್

Webdunia
ಭಾನುವಾರ, 9 ಏಪ್ರಿಲ್ 2023 (18:00 IST)
ದೇಶದಲ್ಲಿ ಅಮೂಲ್‍ಗೆ ಸ್ಪರ್ಧೆ ಒಡ್ಡುವ ಮಾದರಿಯಲ್ಲಿ ಕೆಎಂಎಫ್ ಸಂಸ್ಥೆಯನ್ನು ಬೆಳೆಸುತ್ತೇವೆ. ನಂದಿನಿ ವಿಚಾರದಲ್ಲಿ ಕಾಂಗ್ರೆಸ್ ಆರೋಪ ಆಧಾರರಹಿತ ಮತ್ತು ಅವರದು ರೋಗಿಷ್ಠ ಮನಸ್ಥಿತಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು.ಮಲ್ಲೇಶ್ವರಂನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಕೆ.ಶಿವಕುಮಾರ್, ಸಿದ್ದರಾಮಯ್ಯ ನಂದಿನಿ ಮುಳುಗಿಸುವ ಟೀಕೆಗೆ ಉತ್ತರಿಸಿದ ಅವರು, ನಂದಿನಿ ಮಾತ್ರವಲ್ಲದೆ ರಾಜ್ಯದ ಹಸುಗಳನ್ನು ರಕ್ಷಿಸುವ ಜವಾಬ್ದಾರಿ ನಮ್ಮದು. ಅದಕ್ಕೇ ಗೋಹತ್ಯಾ ನಿಷೇಧ ಮಾಡಿದ್ದೇವೆ. ಕಾಂಗ್ರೆಸ್, ಜೆಡಿಎಸ್ ಪಕ್ಷದ ನಾಯಕರದು ದ್ವಿಮುಖ ನೀತಿ. ಗೋಹತ್ಯೆ ಆಗುತ್ತಿರಬೇಕು. ಆದರೆ, ನಂದಿನಿ ಉಳಿಯಬೇಕೆಂದರೆ ಅದು ಹೇಗೆ ಸಾಧ್ಯ ಎಂದು ಕೇಳಿದರು....ಗೋಹತ್ಯೆ ನಿಷೇಧ ಕಾಯ್ದೆ ವಿರುದ್ಧ ಮತ ಹಾಕಿದವರು ನೀವು ಎಂದು ಟೀಕಿಸಿದರು. ನಂದಿನಿಯನ್ನು ದೇಶದ ದೊಡ್ಡ ಹೈನುಗಾರಿಕಾ ಸಂಸ್ಥೆಯಾಗಿ ಮಾಡುತ್ತೇವೆ ಎಂದು ಸವಾಲೆಸೆದರು....ಪ್ರಧಾನಿಯವರ ಭೇಟಿ ಕೆಲವೇ ಕೆಲವು ನಾಯಕರಿಗೆ ದುಃಖ ತಂದಿದೆ. ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅವರು ಪ್ರಧಾನಿ ಭೇಟಿಯನ್ನು ಖಂಡಿಸಿದ್ದಾರೆ. ಇವರು ಸಣ್ಣ ಮನಸ್ಸು ಹೊಂದಿದ್ದಾರೆ. ಪ್ರವಾಹ, ಕೋವಿಡ್ ವೇಳೆ ಭೇಟಿ ಕೊಟ್ಟಿಲ್ಲ ಎಂದು ಕೇಳಿದ್ದಾರೆ. ಈ ಸಣ್ಣ ಮನಸ್ಸಿನ ವ್ಯಕ್ತಿಗಳು ದೊಡ್ಡ ನಾಯಕರು ಆಗಲು ಅಸಾಧ್ಯ ಎಂದು ಟೀಕಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments