ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜಕೀಯ ಬಣ್ಣ ಲೇಪಿಸುತ್ತಿದೆ ಎಂದು ಬಿಜೆಪಿ ಸಂಸದ ಪ್ರತಾಪ ಸಿಂಹ್ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯಾಧ್ಯಕ್ಷರೊಂದಿಗೆ ಚರ್ಚಿಸಿದ್ದೇವೆ. ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಮಹದಾಯಿ ನ್ಯಾಯಾಧೀಕರಣವನ್ನು ಸ್ಥಾಪನೆ ಮಾಡಿದ್ದೇ ಕಾಂಗ್ರೆಸ್. ಈ ವಿಚಾರದಲ್ಲಿ ಅವರು ರಾಜಕೀಯ ಬಣ್ಣ ಲೇಪಿಸುತ್ತಿದ್ದಾರೆ. ಮಧ್ಯಂತರ ಅರ್ಜಿಯನ್ನು ಕಾನೂನು ಬಾಹಿರವಾಗಿ ಸಲ್ಲಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಮಹದಾಯಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಯವರ ಮನವೊಲಿಸಲು ಬಿಜೆಪಿ ಬದ್ಧವಾಗಿದೆ. ವಿಪಕ್ಷ ಕಾಂಗ್ರೆಸ್ ನಾಯಕರನ್ನು ಮನವೊಲಿಸಲು ನೀವು ಸಿದ್ದರಾಗಿರಿ. ಎಲ್ಲರು ಪಕ್ಷ ಭೇದ ಮರೆತು ಹೋರಾಟ ಮಾಡಬೇಕಿದೆ ಎಂದು ಬಿಜೆಪಿ ಸಂಸದ ಪ್ರತಾಪ ಸಿಂಹ್ ಹೇಳಿದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.