Publish Date: Wed, 02 May 2018 (09:38 IST)
Updated Date: Wed, 02 May 2018 (09:39 IST)
ಬೆಂಗಳೂರು: ಮುಂಬರುವ ಚುನಾವಣೆಗೆ ಬಿಜೆಪಿ ಪರ ಮತ ಯಾಚಿಸಲು ರಾಜ್ಯದ ವಿವಿಧೆಡೆ ಪ್ರವಾಸ ಮಾಡುತ್ತಿರುವ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅದರ ಬೆನ್ನಲ್ಲೇ ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲಾ ಸುದ್ದಿಗೋಷ್ಠಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಣ್ ದೀಪ್ ಸುರ್ಜೇವಾಲಾ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ರೆಡ್ಡಿ ಬ್ರದರ್ಸ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಸಾವಿರಾರು ಕೋಟಿ ರೂ. ಹಗರಣ ನಡೆಸಿದವರು ಹೇಗೆ ಸುಲಭವಾಗಿ ತಪ್ಪಿಸಿಕೊಂಡರು? ಮೋದಿ ಸಮಾವೇಶದಲ್ಲಿ ಯಡಿಯೂರಪ್ಪನವರನ್ನು ಯಾಕೆ ದೂರವಿಡಲಾಗಿದೆ?’ ಎಂದು ಸುರ್ಜೇವಾಲಾ ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.