Select Your Language

Notifications

webdunia
webdunia
webdunia
webdunia

ಐಟಿ ಕಚೇರಿ ಮುಂದೆ ಕಾಂಗ್ರೆಸ್ ಮಾಡಿದ್ದೇನು?

ಐಟಿ ಕಚೇರಿ ಮುಂದೆ ಕಾಂಗ್ರೆಸ್ ಮಾಡಿದ್ದೇನು?
ಹುಬ್ಬಳ್ಳಿ , ಸೋಮವಾರ, 14 ಅಕ್ಟೋಬರ್ 2019 (15:51 IST)
ಐ.ಟಿ ಹಾಗೂ ಇಡಿ ದಾಳಿ ಖಂಡಿಸಿ ಕೈಪಡೆ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿ ನವನಗರದಲ್ಲಿನ ಆದಾಯ ತೆರಿಗೆ ಕಛೇರಿ ಎದುರು ಪ್ರತಿಭಟನೆ ಮಾಡಿದ್ರು.

ಈ ವೇಳೆ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು. ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆಯೇ ಐಟಿ, ಇಡಿ ದಾಳಿಗಳು ನಡೆಯುತ್ತಿವೆ.

ಬಿಜೆಪಿ ತೆರಿಗೆ ಇಲಾಖೆಗಳ ಮೇಲೆ ಒತ್ತಡ ಹಾಕುವ ಮೂಲಕ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗುತ್ತಿದೆ. ಬಿಜೆಪಿ ದ್ವೇಷ ರಾಜಕಾರಣ ಮಾಡುವುದಿಲ್ಲ ಎನ್ನುತ್ತಲೇ ದ್ವೇಷದ ರಾಜಕಾರಣ ಮಾಡುತ್ತಿದೆ.

ಕೂಡಲೇ ಬಿಜೆಪಿ ದ್ವೇಷದ ರಾಜಕಾರಣವನ್ನು ಕೈಬಿಡಬೇಕೆಂದು ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಆಗ್ರಹಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಆ ರೋಗಕ್ಕೆ ಹೆದರಿ ಜೊತೆಯಾಗಿ ದಂಪತಿ ಆತ್ಮಹತ್ಯೆ