Webdunia - Bharat's app for daily news and videos

Install App

ಭಿನ್ನರಲ್ಲೇ ಭಿನ್ನರಾಗ: ತಣ್ಣಗಾಯಿತು ಅತೃಪ್ತ ಶಾಸಕರ ಬಂಡಾಯದ ಬಿಸಿ

Webdunia
ಶನಿವಾರ, 25 ಜೂನ್ 2016 (21:12 IST)
ಭಿನ್ನರಲ್ಲೆ ಭಿನ್ನರಾಗ ಎದುರಾಗಿದ್ದರಿಂದ ಸಿಎಂ ಹಠಾವೋ ಕಾಂಗ್ರೆಸ್ ಬಚಾವೋ ಕೂಗು ಥಂಡಾ ಹೊಡೆದಿದೆ ಎಂದು ಮೂಲಗಳು ತಿಳಿಸಿವೆ.
 
ಭಿನ್ನಮತೀಯ ಶಾಸಕರಲ್ಲಿ ಮೊದಲಿದ್ದ ಹುಮ್ಮಸ್ಸು ಇದೀಗ ಉಳಿದಿಲ್ಲ. ನಾಳೆ ನಿಗದಿಯಾಗಿದ್ದ ಕಾಂಗ್ರೆಸ್ ಅತೃಪ್ತ ಶಾಸಕರ ಸಭೆ ನಡೆಯೋದೇ ಅನುಮಾನವಾಗಿದ್ದರಿಂದ, ಬಂಡಾಯದ ಕೂಗು ತಣ್ಣಗಾಗಿದೆ ಎಂದು ಹೇಳಲಾಗುತ್ತಿದೆ.
 
ಅತೃಪ್ತ ಶಾಸಕರ ಬಣದಲ್ಲಿ ಈಗಾಗಲೇ ಕೆಲವು ಶಾಸಕರಿಗೆ ಬಿಡಿಎ ಸದಸ್ಯ ಸ್ಥಾನ, ಮತ್ತು ಇತರ ಕೆಲ ಆಮಿಷಗಳಿಗೆ ಶಾಸಕರು ಮರಳಾಗುತ್ತಿದ್ದು, ಒಂದು ವೇಳೆ, ಪಕ್ಷದ ವಿರುದ್ಧ ಅಶಿಸ್ತಿನಿಂದ ವರ್ತಿಸಿದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೈಕಮಾಂಡ್ ಎಚ್ಚರಿಕೆಯ ಸಂದೇಶ ರವಾನಿಸಿದೆ.
 
ಹಿರಿಯ ಕಾಂಗ್ರೆಸ್ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಸಮಾಧಾನ ಪಡಿಸಲು ಹಿರಿಯದಲಿತ ಮುಖಂಡ ಮಾಜಿ ಕೇಂದ್ರ ಗೃಹ ಸಚಿವರೊಬ್ಬರನ್ನು ರಾಜ್ಯಕ್ಕೆ ಕಳುಹಿಸಲು ಹೈಕಮಾಂಡ್ ಸೂಚನೆ ನೀಡಿದೆ.
 
ಕೆಲವು ಶಾಸಕರಿಗೆ ರಾಜ್ಯದ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ವಿರುದ್ಧ ಅಸಮಾಧಾನವಿರುವ ಹಿನ್ನೆಲೆಯಲ್ಲಿ ಅವರ ಬದಲಿಗೆ ಬೇರೆಯವರನ್ನು ಸಂಧಾನಕ್ಕಾಗಿ ರವಾನಿಸಿಲು ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments