Webdunia - Bharat's app for daily news and videos

Install App

ಬಿಎಸ್ ವೈ ಡೈರಿ ಬಿಡುಗಡೆ ಮಾಡಿದ ಕಾಂಗ್ರೆಸ್. ಅದರಲ್ಲಿದ್ದದ್ದೇನು ಗೊತ್ತಾ?

Webdunia
ಶನಿವಾರ, 23 ಮಾರ್ಚ್ 2019 (07:09 IST)
ಬೆಂಗಳೂರು : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಈ ವೇಳೆಯಲ್ಲಿ ಕಾಂಗ್ರೆಸ್ ವಕ್ತಾರ ಸುರ್ಜೆವಾಲ, ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರ  ಡೈರಿ ಬಿಡುಗಡೆ ಮಾಡಿದ್ದು,  ಈಗ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.


ಯಡಿಯೂರಪ್ಪ ಸಿಎಂ ಆಗಿದ್ದಾಗ ಬಿಜೆಪಿ ಕೇಂದ್ರ ನಾಯಕರಿಗೆ 1,800 ಕೋಟಿ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಈ ಬಗ್ಗೆ ಡೈರಿಯಲ್ಲಿ ಉಲ್ಲೇಖವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಡೈರಿಯೊಂದನ್ನೂ ಬಿಡುಗಡೆ ಮಾಡಿದ್ದಾರೆ.


ಹಾಗೇ ಕಾಂಗ್ರೆಸ್ ವಕ್ತಾರ ಸುರ್ಜೆವಾಲ ಬಿಡುಗಡೆ ಮಾಡಿರುವ ಡೈರಿಯಲ್ಲಿ 2009 ಫೆಬ್ರವರಿ ದಿನಾಂಕದ ಒಂದು ಪುಟದಲ್ಲಿ ನನ್ನ ಧರ್ಮಪತ್ನಿ ,ಮೈತ್ರಾದೇವಿ ಕಾಲವಾದ ನಂತರ ನನಗೆ ಒಂಟಿತನ ಭಯಂಕರ ಕಾಡಲು ಪ್ರಾರಂಭವಾಯಿತು, ಆದ್ದರಿಂದ ಶೋಭಾ ಕರಂದ್ಲಾಜೆ ಅವರನ್ನು ಕೇರಳದ ಚೋಬಣಕೆರೆ ಭಗವತಿ ದೇವಾಲಯದಲ್ಲಿ ಹಿಂದೂ ಸಂಪ್ರದಾಯದಂತೆ ಲಗ್ನ ಮಾಡಿಕೊಂಡು ನನ್ನ ಪತ್ನಿಯಾಗಿ ಕಾಯಾ ವಾಚಾ ಮನಸಾ ಸ್ವೀಕರಿಸುತ್ತೇನೆ, ಇದಕ್ಕೆ ಯಡಿಯೂರು ಸಿದ್ದಲಿಂಗನೇ ಸಾಕ್ಷಿ ಎಂಬ ಕೈ ಬರಹವಿದೆ' ಎಂದು ಡೈರಿಯಲ್ಲಿ ಉಲ್ಲೇಖಿಸಲಾಗಿದೆ.


 ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರು ವೈಚಾರಿಕವಾಗಿ ದಿವಾಳಿಯಾಗಿದ್ದಾರೆ. ಕಾಂಗ್ರೆಸ್ ನಾಯಕರು ಸಾರ್ವಜನಿಕವಾಗಿ ಚರ್ಚಿಸಲು ಯಾವುದೇ ಅಭಿವೃದ್ಧಿ ಪರ ವಿಷಯಗಳಿಲ್ಲ. ಹಾಗಾಗಿ ನಕಲಿ ಡೈರಿಯನ್ನು ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments