Webdunia - Bharat's app for daily news and videos

Install App

‘ಕಾಂಗ್ರೆಸ್ ನ ಕುಡುಗೋಲು – ಜೆಡಿಎಸ್ ನ ಮಚ್ಚುಗಳು ಮೊಂಡಾಗಿವೆ’

Webdunia
ಮಂಗಳವಾರ, 17 ಡಿಸೆಂಬರ್ 2019 (18:00 IST)
ಜೆಡಿಎಸ್ - ಕಾಂಗ್ರೆಸ್ ನಾಯಕರ ಕುಡುಗೋಲುಗಳು ಮತ್ತು ಮಚ್ಚುಗಳು ಹರಿತ ಕಳೆದುಕೊಂಡು ಮೊಂಡಾಗಿವೆ.

ಹೀಗಂತ ಬಿಜೆಪಿ ನೂತನ ಶಾಸಕ ಟಾಂಗ್ ನೀಡಿದ್ದಾರೆ.

ಮಾಜಿ ಸಚಿವ, ಶಾಸಕ ಸಿ.ಎಸ್.ಪುಟ್ಟರಾಜು ಹೇಳಿಕೆಗೆ ಕೆ.ಆರ್.ಪೇಟೆ ಬಿಜೆಪಿ ಶಾಸಕ ಕೆ.ಸಿ.ನಾರಾಯಣಗೌಡ  ಸಹಕಾರ ಸಂಘಗಳ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಆಯೋಜಿಸಿದ್ದ ಪೂರ್ವಬಾವಿ ಸಭೆಯಲ್ಲಿ ಟಾಂಗ್ ಕೊಟ್ಟಿದ್ದಾರೆ.
 

ಶಾಸಕ ಸಿ.ಎಸ್.ಪುಟ್ಟರಾಜು ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಯಾವ ರೀತಿ ಬಿ ಫಾರಂ ಸಿಕ್ಕಿತು ಎಂಬುದು ನನಗೆ ಚೆನ್ನಾಗಿ ಗೊತ್ತು. ಅವರಿಗೆ ಎಲ್ಲಿಂದ ಸಿಕ್ಕಿತು, ಜಿಲ್ಲೆಯ ಜವಾಬ್ದಾರಿ ಹೊತ್ತವನು ಇದೇ ನಾರಾಯಣಗೌಡ ಎಂಬುದು ಬಹಿರಂಗ ಸತ್ಯವಾಗಿದೆ. ನಾನು ಮಾಡಿದ ಸಹಾಯವನ್ನು ಮೊದಲು ನೆನೆದು ನಂತರ ನನ್ನ ಬಿ ಫಾರಂ ಬಗ್ಗೆ ಮಾತನಾಡಲಿ. ಜೆಡಿಎಸ್ ಪಕ್ಷದ ಸಂಘಟನೆಗೆ ನಾನು ಏನು ಮಾಡಿದ್ದೀನಿ ಎಂದು ಪುಟ್ಟರಾಜು ಅವರ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದಿದ್ದಾರೆ.

ಜೆಡಿಎಸ್ ಕಾಂಗ್ರೆಸ್ ನಾಯಕರ ಕುಡುಗೋಲುಗಳು ಮತ್ತು ಮಚ್ಚುಗಳು ಹರಿತ ಕಳೆದುಕೊಂಡು ಮೊಂಡಾಗಿವೆ.
ರಾಜ್ಯದ ಕೊಳೆ ಹಾಗೂ ರೈತರ ಜಮೀನಿನಲ್ಲಿ ಬೆಳೆದಿರುವ ಕಳೆಯನ್ನು ಕಿತ್ತು ಭೂಮಿಯನ್ನು ಹಸನು ಮಾಡಲು ಯಡಿಯೂರಪ್ಪ ಅವರ ಹರಿತವಾದ ಕುಡುಗೋಲು ಬೇಕಾಗಿದೆ. ಜಿಲ್ಲೆಯ ನಾಲ್ಕೈದು ತಾಲ್ಲೂಕುಗಳಲ್ಲಿ ಕಮಲ ಅರಳುವುದು ನಿಶ್ಚಿತವಾಗಿದೆ ಎಂದರು.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments