Webdunia - Bharat's app for daily news and videos

Install App

ಪ್ರಧಾನಿ ಮೋದಿ ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜುನ ಖರ್ಗೆ

Webdunia
ಗುರುವಾರ, 1 ಮಾರ್ಚ್ 2018 (17:14 IST)
ಲೋಕಪಾಲ ಆಯ್ಕೆ ಸಮಿತಿ ಸಭೆಗೆ ಹಾಜರಾಗುವಂತೆ ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ನೀಡಲಾಗಿದ್ದ ಆಹ್ವಾನವನ್ನು ಅವರು ತಿರಸ್ಕರಿಸಿದ್ದಾರೆ.
ಈ ಸಭೆಗೆ ವಿಶೇಷ ಆಹ್ವಾನಿತರಾಗಿ ಬರುವಂತೆ ಪ್ರಧಾನಿ ಮೋದಿ ಆಹ್ವಾನವಿತ್ತಿದ್ದರು. ಆದರೆ ಖರ್ಗೆ ಸಭೆಗೆ ಹಾಜರಾಗದೇ ಇರಲು ತೀರ್ಮಾನಿಸಿದ್ದಾರೆ. ಸಭೆಯಲ್ಲಿ ಮೋದಿ ಜತೆಗೆ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಆಗಮಿಸಲಿದ್ದಾರೆ.
 
ಆದರೆ ಸಭೆಯಲ್ಲಿ ತಮಗೆ ವಿಶೇಷ ಆಹ್ವಾನಿತನ ಸ್ಥಾನ ನೀಡಲಾಗಿದೆಯಷ್ಟೆ. ಹೀಗಾಗಿ ಡಮ್ಮಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ಅದನ್ನು ವಿರೋಧಿಸುವ ಅಧಿಕಾರವಿರುವುದಿಲ್ಲ ಎಂದು ಸಭೆಯಲ್ಲಿ ಭಾಗವಹಿಸದೇ ಇರಲು ಖರ್ಗೆ ತೀರ್ಮಾನಿಸಿದ್ದಾರೆ.
 
 
ಬಿಜೆಪಿ ಪಾದಯಾತ್ರೆಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ
 
ಬೆಂಗಳೂರು ರಕ್ಷಿಸಿ ಎಂದು ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ಟ್ಟಿದ್ದಾರೆ.
 
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರನ್ನು ಮುಳುಗಿಸಿದವರೇ ಬಿಜೆಪಿಯವರು. ಬೆಂಗಳೂರನ್ನು ಬಿಜೆಪಿ ಗೂಂಡಾಗಳಿಂದ ರಕ್ಷಿಸಬೇಕಷ್ಟೇ. ಯಾವ ಪಾದಯಾತ್ರೆ ಮಾಡಿದ್ರೆ ಏನು ಪ್ರಯೋಜನ? ಎಂದು ಟಾಂಗ್ ಕೊಟ್ಟಿದ್ದಾರೆ.
 
ಅತ್ತ ಗೃಹ ಸಚಿವ ರಾಮಲಿಂಗಾ ರೆಡ್ಡಿ ಕೂಡಾ ಇದೇ ವಿಚಾರಕ್ಕೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಲ್ಲಿ ಗೂಂಡಾಗಿರಿ ನಡೆಸುತ್ತಿರುವವರೇ ಬಿಜೆಪಿಯವರು ಎಂದು ವಾಗ್ದಾಳಿ ನಡೆಸಿದ್ದಾರೆ.
 
ಮಾಧ್ಯಮದವರ ಮೇಲೆ ಸಿಎಂ ಬೆಂಗಾವಲು ಪಡೆಯಿಂದ ದಬ್ಬಾಳಿಕೆ!
 
ಸಿಎಂ ಬೆಂಗಾವಲು ಪಡೆಯವರು ಮಾಧ್ಯಮದವರ ಮೇಲೆ ದಬ್ಬಾಳಿಕೆ ನಡೆಸಿದ ಕುರಿತು ವರದಿಯಾಗಿದೆ. ಬೆಂಗಳೂರಿನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ವೇಳೆ ಈ ಘಟನೆ ನಡೆದಿದೆ. 
 
ಸಿಎಂ ಬೆಂಗಾವಲು ಪಡೆಯವರು ಕ್ಯಾಮೆರಾ ಮೆನ್ ಗಳಿಗೆ ವಿಡಿಯೋ ಮಾಡದಂತೆ ತಡೆಯನ್ನುಂಟು ಮಾಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಕರ್ತವ್ಯಕ್ಕೆ ಸಿಎಂ ಬೆಂಗಾವಲು ಪಡೆಯವರು ಅಡ್ಡಿಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments