Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನವರು ತಮ್ಮ ದಾರಿ ತಾವು ನೋಡಿಕೊಳ್ಳುವುದು ಸೂಕ್ತ ಎಂದು ಬಸವರಾಜ್ ಹೊರಟ್ಟಿ ಹೇಳಿದ್ಯಾಕೆ?

ಕಾಂಗ್ರೆಸ್ ನವರು ತಮ್ಮ ದಾರಿ ತಾವು ನೋಡಿಕೊಳ್ಳುವುದು ಸೂಕ್ತ ಎಂದು ಬಸವರಾಜ್ ಹೊರಟ್ಟಿ ಹೇಳಿದ್ಯಾಕೆ?
ಹುಬ್ಬಳ್ಳಿ , ಮಂಗಳವಾರ, 29 ಜನವರಿ 2019 (08:14 IST)
ಹುಬ್ಬಳ್ಳಿ : ಕಾಂಗ್ರೆಸ್ ನ ಕೆಲವು ಸಚಿವರು ಸಿದ್ಧರಾಮಯ್ಯ ಅವರನ್ನು ನಮ್ಮ ಮುಖ್ಯಮಂತ್ರಿ ಎಂದು ಹೇಳಿಕೆ ನೀಡುತ್ತಿರುವುಕ್ಕೆ ಕಾಂಗ್ರೆಸ್ ಸಚಿವರ ವಿರುದ್ಧ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.


ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ‘ ಕೆಲವು ಸಚಿವರು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುತ್ತಿದ್ದು, ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಈ ರೀತಿ ಪದೇ ಪದೇ ಮಾತನಾಡುವುದರಿಂದ ಆಡಳಿತದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದಕ್ಕೆ ಕಡಿವಾಣ ಹಾಕಬೇಕು, ಇಲ್ಲವಾದರೆ ತಮ್ಮ ತಮ್ಮ ದಾರಿಯನ್ನು ನೋಡಿಕೊಳ್ಳುವುದು ಸೂಕ್ತ’ ಎಂದು ಹೇಳಿದ್ದಾರೆ.


‘ಕಾಂಗ್ರೆಸ್ ಶಾಸಕರು ಈ ರೀತಿ ಹೇಳಿಕೆ ನೀಡುವುದರಿಂದ ಸಿದ್ದರಾಮಯ್ಯನವರೇ ಕುಳಿತು ಮಾತನಾಡಿಸುತ್ತಿದ್ದಾರೆಂಬ ಭಾವನೆ ರಾಜ್ಯದ ಜನರಲ್ಲಿ ಮೂಡುತ್ತದೆ. ವಿನಾಕಾರಣ ಹೆಸರು ಹಾಳಾಗುತ್ತದೆ. ಆದ್ದರಿಂದ ಮೈತ್ರಿ ಧರ್ಮದ ಪಾಲನೆ ಮಾಡುವುದು ಎರಡೂ ಪಕ್ಷದ ಕರ್ತವ್ಯ. ಈ ರೀತಿ ಉಸಿರುಗಟ್ಟಿದ ವಾತಾವರಣದಲ್ಲಿ ಕೆಲಸ ಮಾಡಲು ಹೇಗೆ ಸಾಧ್ಯ’ ಎಂದು ಅವರು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಕಲಬುರಗಿ ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದ ಶ್ರೀರಾಮುಲು