Webdunia - Bharat's app for daily news and videos

Install App

ಕಾಂಗ್ರೆಸ್ ನವರು ತಮ್ಮ ದಾರಿ ತಾವು ನೋಡಿಕೊಳ್ಳುವುದು ಸೂಕ್ತ ಎಂದು ಬಸವರಾಜ್ ಹೊರಟ್ಟಿ ಹೇಳಿದ್ಯಾಕೆ?

Webdunia
ಮಂಗಳವಾರ, 29 ಜನವರಿ 2019 (08:14 IST)
ಹುಬ್ಬಳ್ಳಿ : ಕಾಂಗ್ರೆಸ್ ನ ಕೆಲವು ಸಚಿವರು ಸಿದ್ಧರಾಮಯ್ಯ ಅವರನ್ನು ನಮ್ಮ ಮುಖ್ಯಮಂತ್ರಿ ಎಂದು ಹೇಳಿಕೆ ನೀಡುತ್ತಿರುವುಕ್ಕೆ ಕಾಂಗ್ರೆಸ್ ಸಚಿವರ ವಿರುದ್ಧ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.


ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ‘ ಕೆಲವು ಸಚಿವರು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುತ್ತಿದ್ದು, ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಈ ರೀತಿ ಪದೇ ಪದೇ ಮಾತನಾಡುವುದರಿಂದ ಆಡಳಿತದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದಕ್ಕೆ ಕಡಿವಾಣ ಹಾಕಬೇಕು, ಇಲ್ಲವಾದರೆ ತಮ್ಮ ತಮ್ಮ ದಾರಿಯನ್ನು ನೋಡಿಕೊಳ್ಳುವುದು ಸೂಕ್ತ’ ಎಂದು ಹೇಳಿದ್ದಾರೆ.


‘ಕಾಂಗ್ರೆಸ್ ಶಾಸಕರು ಈ ರೀತಿ ಹೇಳಿಕೆ ನೀಡುವುದರಿಂದ ಸಿದ್ದರಾಮಯ್ಯನವರೇ ಕುಳಿತು ಮಾತನಾಡಿಸುತ್ತಿದ್ದಾರೆಂಬ ಭಾವನೆ ರಾಜ್ಯದ ಜನರಲ್ಲಿ ಮೂಡುತ್ತದೆ. ವಿನಾಕಾರಣ ಹೆಸರು ಹಾಳಾಗುತ್ತದೆ. ಆದ್ದರಿಂದ ಮೈತ್ರಿ ಧರ್ಮದ ಪಾಲನೆ ಮಾಡುವುದು ಎರಡೂ ಪಕ್ಷದ ಕರ್ತವ್ಯ. ಈ ರೀತಿ ಉಸಿರುಗಟ್ಟಿದ ವಾತಾವರಣದಲ್ಲಿ ಕೆಲಸ ಮಾಡಲು ಹೇಗೆ ಸಾಧ್ಯ’ ಎಂದು ಅವರು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments