Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಚಾಲನೆ

ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಚಾಲನೆ
bangalore , ಬುಧವಾರ, 11 ಜನವರಿ 2023 (20:46 IST)
ಕಾಂಗ್ರೆಸ್ ನಾಯಕರು ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ BJP ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ. ಕಾಂಗ್ರೆಸ್​​​ ಇಂದು ಬೆಳಗಾವಿಯಿಂದ ಪ್ರಜಾಧ್ವನಿ ಯಾತ್ರೆಯನ್ನುಆರಂಭಿಸಿದೆ. ಈ ಯಾತ್ರೆಗಾಗಿ ಎರಡು ಬಸ್​​​​ಗಳು ಅಣಿಯಾಗಿದ್ದು, ಕಾಂಗ್ರೆಸ್ ಧುರೀಣರು 21 ಜಿಲ್ಲೆಗಳಲ್ಲಿ ಸಂಚರಿಸಿ ಎರಡೂ ಸರ್ಕಾರಗಳ ವೈಫಲ್ಯಗಳನ್ನು ಜನರ ಮುಂದಿಡಲಿದ್ದಾರಂತೆ. ಬೆಳಗಾವಿ ವೀರಸೌಧದಲ್ಲಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾಂಗ್ರೆಸ್​​​ ನಾಯಕರು ಯಾತ್ರೆಯನ್ನು ಆರಂಭಿಸಿದ್ದಾರೆ. ಒಂದೇ ಸೀಟಿನಲ್ಲಿ ಕುಳಿತು ಮಾಜಿ ಸಿಎಂ ಸಿದ್ದರಾಮಯ್ಯ, KPCC ಅಧ್ಯಕ್ಷ D.K ಶಿವಕುಮಾರ್​​ ಪ್ರಯಾಣ ಆರಂಭಿಸಿದ್ದಾರೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಬೆಳಗಾವಿಯಿಂದ ಚಿಕ್ಕೋಡಿಗೆ ಪ್ರಜಾಧ್ವನಿ ಯಾತ್ರೆ ತೆರಳಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಮಿಷನ್ ದಂಧೆಗೆ ಮಗಳು, ಮೊಮ್ಮಗ ಬಲಿ