ಬಂದೂಕ್, ಬಾಂಬ್ ಮಾಡುವವರ ಬೆನ್ನಿಗೆ ನಿಂತಿದ್ದೀರಿ, ಆರ್ ಎಸ್ಎಸ್ ಗೆ ಬೆದರಿಕ ಹಾಕ್ತಿದ್ದೀರಿ

Krishnaveni K
ಸೋಮವಾರ, 13 ಅಕ್ಟೋಬರ್ 2025 (11:37 IST)
Photo Credit: X
ಬೆಂಗಳೂರು: ಆರ್ ಎಸ್ಎಸ್ ನಿಷೇಧಿಸಬೇಕು ಎಂದು ಬೇಡಿಕೆಯಿಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಹಿಂದೂ ಸಂಘಟನೆಗಳು ಪ್ರಶ್ನೆ ಮಾಡಿದ್ದು ಬಂದೂಕು, ಬಾಂಬ್ ಇಡುವವರ ಬೆನ್ನಿಗೆ ನಿಲ್ಲುತ್ತೀರಿ ಎಂದು ಕಿಡಿ ಕಾರಿದೆ.

ಆರ್ ಎಸ್ಎಸ್ ಶತಮಾನೋತ್ಸವ ಕಾರ್ಯಕ್ರಮ ಬೆನ್ನಲ್ಲೇ ರಾಜ್ಯದಲ್ಲಿ ಸಂಘಟನೆಯ ಚಟುವಟಿಕೆಗಳಿಗೆ ನಿಯಂತ್ರಣ ಹೇರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಮನವಿ ಮಾಡಿದ್ದುರು. ಇದು ಈಗ ರಾಜ್ಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದ್ದಾರೆ.

ಇನ್ನು ಸೋಷಿಯಲ್ ಮೀಡಿಯಾದಲ್ಲಿ ಹಿಂದೂಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಡು ರಸ್ತೆಯಲ್ಲಿ ನಿಂತು ಪಾಕಿಸ್ತಾನಕ್ಕೆ ಜಿಂದಾಬಾದ್ ಎನ್ನುವವರನ್ನು ಸುಮ್ಮನೇ ಬಿಡುತ್ತೀರಿ. ಆದರೆ ಆರ್ ಎಸ್ಎಸ್ ಮೇಲೆ ಕಡಿವಾಣ ಹಾಕಲು ಪ್ರಯತ್ನಿಸುತ್ತಿದ್ದೀರಿ ಎಂದು ಕಿಡಿ ಕಾರಿದೆ.

ಆರ್ ಎಸ್ಎಸ್ ಶತಮಾನೋತ್ಸವ ನೋಡಿದ ನಿಮಗೆ ಹೊಟ್ಟೆ ಉರಿಯಾಗಿದೆ. ಇದಕ್ಕೇ ಆರ್ ಎಸ್ಎಸ್ ಮೇಲೆ ಹಗೆ ಸಾಧಿಸುತ್ತಿದ್ದೀರಿ. ಆರ್ ಎಸ್ಎಸ್ ಶಾಖೆಗೆ ಭೇಟಿ ಕೊಟ್ಟು ನೋಡಿ. ಏನು ಸಮಾಜದ್ರೋಹಿ ಕೆಲಸ ಮಾಡುತ್ತಿದೆ ಎಂದು ಹೇಳಲಿ ಎಂದು ಕೆಲವರು ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಮುಂದಿನ ಸುದ್ದಿ
Show comments