Publish Date: Thu, 12 Apr 2018 (09:32 IST)
Updated Date: Thu, 12 Apr 2018 (09:34 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಅತ್ತ ಜೆಡಿಎಸ್ ಕೂಡಾ ಫೈನಲ್ ಮಾಡಿಕೊಂಡಿದೆ. ಆದರೆ ಕಾಂಗ್ರೆಸ್ ಮಾತ್ರ ಇನ್ನೂ ಟಿಕೆಟ್ ಘೋಷಣೆ ಮಾಡದೇ ಇರುವುದನ್ನು ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಟೀಕಾಸ್ತ್ರ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುತ್ತಿದೆ ಎಂಬ ಸುದ್ದಿ ಓಡಾಡುತ್ತಿದ್ದರೂ ಇನ್ನೂ ಯಾರಿಗೂ ಟಿಕೆಟ್ ಖಚಿತವಾಗಿಲ್ಲ. ಈ ಬಗ್ಗೆ ಯಡಿಯೂರಪ್ಪ ಟೀಕಿಸಿದ್ದಾರೆ.
‘ಕಾಂಗ್ರೆಸ್ ಈಗ ಒಡೆದ ಮನೆಯಂತಾಗಿದೆ. ಸಿಎಂ ಸಿದ್ದರಾಮಯ್ಯ-ಪರಮೇಶ್ವರ್ ನಡುವೆಯೇ ಸರಿಯಿಲ್ಲ. ಅದಕ್ಕೇ ಇನ್ನೂ ಟಿಕೆಟ್ ಫೈನಲ್ ಆಗುತ್ತಿಲ್ಲ. ಇದು ಕಾಂಗ್ರೆಸ್ ನ ಸ್ಥಿತಿ’ ಎಂದು ಹುಬ್ಬಳ್ಳಿಯಲ್ಲಿ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.
Krishnaveni K
Publish Date: Thu, 12 Apr 2018 (09:32 IST)
Updated Date: Thu, 12 Apr 2018 (09:34 IST)