Publish Date: Tue, 23 Mar 2021 (12:54 IST)
Updated Date: Tue, 23 Mar 2021 (12:57 IST)
ಬೆಂಗಳೂರು : ಸಿಡಿ ಕೇಸ್ ತನಿಖೆಗೆ ವಹಿಸುವಂತೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ , ಸ್ಪೀಕರ್ ಕಾಗೇರಿ ಸಂಧಾನ ವಿಫಲವಾಗಿದೆ ಎನ್ನಲಾಗಿದೆ.
ಸ್ಪೀಕರ್ ಕಾಗೇರಿ ನೇತೃತ್ವದಲ್ಲಿ ಸಂಧಾನ ಸಭೆ ನಡೆಸಲಾಗಿದೆ. ಆದರೆ ಪಟ್ಟು ಹಿಡಿದ ಕಾಂಗ್ರೆಸ್ ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ತನಿಖೆಗೆ ಆಗ್ರಹಿಸಿದೆ.
ಆದರೆ ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಸೊಪ್ಪು ಹಾಕದ ಸರ್ಕಾರ ಎಸ್ ಐಟಿ ತನಿಖೆ ನಡೆಸುವುದಾಗಿ ಹೇಳಿದೆ. ಇದೀಗ ಸಿಎಂ ಮನವೊಲಿಕೆಗೂ ಬಗ್ಗದ ಕಾಂಗ್ರೆಸ್ ಸದಸ್ಯರು, ಧರಣಿ ಮುಂದುವರಿಸಲು ನಿರ್ಧಾರ ಮಾಡಿದ್ದಾರೆ.