Select Your Language

Notifications

webdunia
webdunia
webdunia
webdunia

ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕು ಕಾರಣ: ಈಶ್ವರಪ್ಪ

ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕು ಕಾರಣ: ಈಶ್ವರಪ್ಪ
ಶಿವಮೊಗ್ಗ , ಸೋಮವಾರ, 23 ಮೇ 2022 (08:22 IST)
ಶಿವಮೊಗ್ಗ : ದತ್ತಪೀಠ ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕೆ ಕಾರಣವಾಗಿದ್ದು, ಕೆಲ ಕಿಡಿಗೇಡಿಗಳಿಗೆ ಕಾಂಗ್ರೆಸ್ನವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿ ಕಾರಿದ್ದಾರೆ.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ಆದೇಶಕ್ಕೆ ನಾವು ಬೆಲೆ ಕೊಡುತ್ತೇವೆ. ದತ್ತಪೀಠದಲ್ಲಿ ಗೋರಿ ನಿರ್ಮಾಣ ಮಾಡಿ, ಅದಕ್ಕೆ ಬಾಬಾ ಬುಡನ್ಗಿರಿ ಎಂದು ಹೆಸರು ಹೇಳಿದರೆ ಆಗುತ್ತೇ? ದತ್ತಪೀಠ ಎಂಬ ಹೆಸರಿದ್ದು, ನ್ಯಾಯಾಲಯದ ಆದೇಶದಂತೆ ಅದು ದತ್ತಪೀಠವೇ ಆಗಿದೆ.

ಹೀಗಿರುವಾಗ ಕೆಲವು ಕಿಡಿಗೇಡಿಗಳು ಅಲ್ಲಿ ನಮಾಜ್ ಮಾಡಿ, ಮಾಂಸಾಹಾರ ಸೇವಿಸಿದ್ದಾರೆ ಅಂದರೆ ಅವರಿಗೆ ಇನ್ನೆಷ್ಟು ಸೊಕ್ಕು ಇರಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  

 

 

Share this Story:

Follow Webdunia kannada

ಮುಂದಿನ ಸುದ್ದಿ

ಹುಟ್ಟುಹಬ್ಬದ ಆಚರಣೆ ದಿನವೇ ಸಾವಿನ ದಿನವಾಯ್ತ!?