Webdunia - Bharat's app for daily news and videos

Install App

ಗೋ ಬ್ಯಾಕ್ ಗವರ್ನರ್: ಕಾಂಗ್ರೆಸ್ ನಿಂದ ಅಭಿಯಾನ

Krishnaveni K
ಶುಕ್ರವಾರ, 23 ಜನವರಿ 2026 (09:25 IST)
Photo Credit: X
ಬೆಂಗಳೂರು: ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಇದೀಗ ಕಾಂಗ್ರೆಸ್ ನಾಯಕರು ಗೋ ಬ್ಯಾಕ್ ಗವರ್ನರ್ ಎಂಬ ಅಭಿಯಾನ ಆರಂಭಿಸಲು ಹೊರಟಿದೆ.

ರಾಜ್ಯಪಾಲರು ನಿನ್ನೆ ಅಧಿವೇಶನದಲ್ಲಿ ಮನ್ರೇಗಾ ಯೋಜನೆ ಟೀಕಿಸಿ ಬರೆದಿದ್ದ ಅಂಶಗಳನ್ನೊಳಗೊಂಡ ಸರ್ಕಾರ ಬರೆದುಕೊಟ್ಟ ಭಾಷಣ ಓದಿರಲಿಲ್ಲ. ಇದರ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಸದನದಲ್ಲೇ ರಾಜ್ಯಪಾಲರನ್ನು ತಡೆಯುವ ಪ್ರಯತ್ನ ಮಾಡಿತ್ತು.

ಇದರ ಬೆನ್ನಲ್ಲೇ ಸಿಎಂ ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೂ ದೂರು ನೀಡಲು ಮುಂದಾಗಿದ್ದಾರೆ. ರಾಜ್ಯಪಾಲರು ಸರ್ಕಾರದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿಲ್ಲ. ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದರ ಬೆನ್ನಲ್ಲೇ ಇಂತಹ ರಾಜ್ಯಪಾಲರ ಅಗತ್ಯ ನಮಗಿಲ್ಲ. ಗೋ ಬ್ಯಾಕ್ ಗವರ್ನರ್ ಎಂದು ಅಭಿಯಾನವನ್ನೇ ಆರಂಭಿಸಲು ಮುಂದಾಗಿದ್ದಾರೆ. ರಾಜ್ಯಪಾಲರು ಸಾಂವಿಧಾನಿಕ ಹುದ್ದೆಯನ್ನು ಮರೆತು ಒಂದು ಪಕ್ಷಕ್ಕೆ ನಿಷ್ಠರಾಗಿರಬಾರದು ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments