Select Your Language

Notifications

webdunia
webdunia
webdunia
webdunia

ಬಿಜೆಪಿ ನವಶಕ್ತಿ ಸಮಾವೇಶ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶ

ಬಿಜೆಪಿ ನವಶಕ್ತಿ ಸಮಾವೇಶ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶ
bangalore , ಭಾನುವಾರ, 20 ನವೆಂಬರ್ 2022 (20:21 IST)
ರಾಜ್ಯ ಬಿಜೆಪಿ ಆಯೋಜಿಸಿರುವ ನವಶಕ್ತಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಸಜ್ಜಾಗಿದ್ದು, ಐಕ್ಯತಾ ಸಮಾವೇಶಕ್ಕೆ ಸಿದ್ಧತೆ ಆರಂಭಿಸಿದೆ. ಬಿಜೆಪಿಯ ಎಸ್​ಸಿ, ಎಸ್​ಟಿ ಸಮಾವೇಶ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶ ನಡೆಸಲು ತೀರ್ಮಾನಿಸಿದೆ.ಡಿಸೆಂಬರ್ 6 ರಂದು ಕಾಂಗ್ರೆಸ್ ಐಕ್ಯತಾ ಸಮಾವೇಶ ನಡೆಯಲಿದ್ದು, ಪೂರ್ವ ಸಿದ್ಧತೆಗಾಗಿ ಕಾಂಗ್ರೆಸ್ ನಾಯಕರ ಸಭೆ ನಗರದ ಖಾಸಗಿ ಹೋಟೆಲ್​ನಲ್ಲಿ ಇಂದು ನಡೆದಿದೆ. ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ಎಸ್​ಸಿ, ಎಸ್​ಟಿ ನಾಯಕರೊಂದಿಗೆ ಸಭೆ ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಭೆಯಲ್ಲಿ ಪಾಲ್ಗೊಂಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರು ಘಟನೆ ಖಂಡಿಸಿದ ಮಾಜಿ ಸಚಿವ ಜಿ ಪರಮೇಶ್ವರ್