Webdunia - Bharat's app for daily news and videos

Install App

ನಾಯಕರನ್ನು ಕಾಂಗ್ರೆಸ್ ಎಟಿಎಂ ಆಗಿ ಬಳಸಿಕೊಳ್ಳುತ್ತಿದೆ- ಮತ್ತೆ ಕೈ ನಾಯಕರ ವಿರುದ್ಧ ಸಿಡಿದೆದ್ದ ರೋಷನ್ ಬೇಗ್

Webdunia
ಬುಧವಾರ, 22 ಮೇ 2019 (12:02 IST)
ಬೆಂಗಳೂರು : ಹಲವು ನಾಯಕರನ್ನು ಕಾಂಗ್ರೆಸ್ ಎಟಿಎಂ ಆಗಿ ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ನ ಮಾಜಿ ಶಾಸಕ ರೋಷನ್ ಬೇಗ್ ಇದೀಗ ಮತ್ತೆ ಕಾಂಗ್ರೆಸ್ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ.




ಮಾಜಿ ಶಾಸಕ ರೋಷನ್ ಬೇಗ್ ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ವಿರುದ್ಧ ಹೇಳಿಕೆ ನೀಡಿ ಕಾಂಗ್ರೆಸ್ ಶಾಸಕರ ಕೆಂಗಣ್ಣಿಗೆ ಗುರಿಯಾಗಿದ್ದರು.


ಇದೀಗ ಟ್ವೀಟ್ ಮಾಡಿರುವ ಬೇಗ್, ಹಲವು ನಾಯಕರನ್ನು ಕಾಂಗ್ರೆಸ್ ಎಟಿಎಂ ಆಗಿ ಬಳಸಿಕೊಳ್ಳುತ್ತಿದೆ. ಸಚಿವರಾದ ಡಿ.ಕೆ ಶಿವಕುಮಾರ್, ರಾಮಲಿಂಗಾರೆಡ್ಡಿ, ಎಂ.ಬಿ ಪಾಟೀಲ್, ಕೆಜೆ.ಜಾರ್ಜ್ ಸಾಕಷ್ಟು ವರ್ಷದಿಂದ ಪಕ್ಷದಲ್ಲಿದ್ದಾರೆ. ಇವರೆಲ್ಲರ ಬಗ್ಗೆ ನನಗೆ ಅಪಾರ ಗೌರವವಿದೆ. ಇವರೆಲ್ಲರೂ ಕಾಂಗ್ರೆಸ್ ಕಟ್ಟಲು ಶ್ರಮಿಸುತ್ತಿದ್ದಾರೆ. ಆದರೆ ಅವರನ್ನು ಪರ್ಸನಲ್ ಎಟಿಎಂ ರೀತಿ ಬಳಸಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.


ಆಪರೇಷನ್ ಕಮಲದ ಬಗ್ಗೆ ಕಾಂಗ್ರೆಸ್ ಟೀಕಿಸುತ್ತಿದೆ. ಆದರೆ ಸಂಪುಟದ ಪ್ರಮುಖ ಖಾತೆಗಳನ್ನು ಬಿಕರಿ ಮಾಡಲಾಗಿದೆ. ಹಣ ಪಡೆದು ಖಾತೆ ಹಂಚಿರುವ ನಾಯಕರು ಆಪರೇಷನ್ ಕಮಲದ ಬಗ್ಗೆ ಮಾತನಾಡುವುದು ಅಪಹಾಸ್ಯ ಎಂದು ಟ್ವಿಟ್ಟರ್ ನಲ್ಲಿ  ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments