ನಾಯಕರನ್ನು ಕಾಂಗ್ರೆಸ್ ಎಟಿಎಂ ಆಗಿ ಬಳಸಿಕೊಳ್ಳುತ್ತಿದೆ- ಮತ್ತೆ ಕೈ ನಾಯಕರ ವಿರುದ್ಧ ಸಿಡಿದೆದ್ದ ರೋಷನ್ ಬೇಗ್

Webdunia
ಬುಧವಾರ, 22 ಮೇ 2019 (12:02 IST)
ಬೆಂಗಳೂರು : ಹಲವು ನಾಯಕರನ್ನು ಕಾಂಗ್ರೆಸ್ ಎಟಿಎಂ ಆಗಿ ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ನ ಮಾಜಿ ಶಾಸಕ ರೋಷನ್ ಬೇಗ್ ಇದೀಗ ಮತ್ತೆ ಕಾಂಗ್ರೆಸ್ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ.




ಮಾಜಿ ಶಾಸಕ ರೋಷನ್ ಬೇಗ್ ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ವಿರುದ್ಧ ಹೇಳಿಕೆ ನೀಡಿ ಕಾಂಗ್ರೆಸ್ ಶಾಸಕರ ಕೆಂಗಣ್ಣಿಗೆ ಗುರಿಯಾಗಿದ್ದರು.


ಇದೀಗ ಟ್ವೀಟ್ ಮಾಡಿರುವ ಬೇಗ್, ಹಲವು ನಾಯಕರನ್ನು ಕಾಂಗ್ರೆಸ್ ಎಟಿಎಂ ಆಗಿ ಬಳಸಿಕೊಳ್ಳುತ್ತಿದೆ. ಸಚಿವರಾದ ಡಿ.ಕೆ ಶಿವಕುಮಾರ್, ರಾಮಲಿಂಗಾರೆಡ್ಡಿ, ಎಂ.ಬಿ ಪಾಟೀಲ್, ಕೆಜೆ.ಜಾರ್ಜ್ ಸಾಕಷ್ಟು ವರ್ಷದಿಂದ ಪಕ್ಷದಲ್ಲಿದ್ದಾರೆ. ಇವರೆಲ್ಲರ ಬಗ್ಗೆ ನನಗೆ ಅಪಾರ ಗೌರವವಿದೆ. ಇವರೆಲ್ಲರೂ ಕಾಂಗ್ರೆಸ್ ಕಟ್ಟಲು ಶ್ರಮಿಸುತ್ತಿದ್ದಾರೆ. ಆದರೆ ಅವರನ್ನು ಪರ್ಸನಲ್ ಎಟಿಎಂ ರೀತಿ ಬಳಸಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.


ಆಪರೇಷನ್ ಕಮಲದ ಬಗ್ಗೆ ಕಾಂಗ್ರೆಸ್ ಟೀಕಿಸುತ್ತಿದೆ. ಆದರೆ ಸಂಪುಟದ ಪ್ರಮುಖ ಖಾತೆಗಳನ್ನು ಬಿಕರಿ ಮಾಡಲಾಗಿದೆ. ಹಣ ಪಡೆದು ಖಾತೆ ಹಂಚಿರುವ ನಾಯಕರು ಆಪರೇಷನ್ ಕಮಲದ ಬಗ್ಗೆ ಮಾತನಾಡುವುದು ಅಪಹಾಸ್ಯ ಎಂದು ಟ್ವಿಟ್ಟರ್ ನಲ್ಲಿ  ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ
Show comments