Select Your Language

Notifications

webdunia
webdunia
webdunia
webdunia

ಕಂಪ್ಲಿ ಶಾಸಕ ಗಣೇಶ್ ನನ್ನು ಮತ್ತೆ ರೌಡಿ ಪಟ್ಟಿಗೆ ಸೇರಿಸಲಾಗುವುದು - ಗೃಹ ಸಚಿವ ಎಂ.ಬಿ.ಪಾಟೀಲ್

ಕಂಪ್ಲಿ  ಶಾಸಕ ಗಣೇಶ್ ನನ್ನು ಮತ್ತೆ ರೌಡಿ ಪಟ್ಟಿಗೆ ಸೇರಿಸಲಾಗುವುದು  - ಗೃಹ ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು , ಗುರುವಾರ, 24 ಜನವರಿ 2019 (10:49 IST)
ಬೆಂಗಳೂರು : ಈ ಹಿಂದೆ ಎಂಟು ವರ್ಷಗಳ ಕಾಲ ರೌಡಿಶೀಟ್ ನಲ್ಲಿದ್ದ ಕಂಪ್ಲಿ  ಶಾಸಕ ಗಣೇಶ್, ಶಾಸಕ ಆನಂದ್ ಸಿಂಗ್ ಮೇಲೆ ಈಗಲ್ ಟನ್ ರೆಸಾರ್ಟ್ ನಲ್ಲಿ ಹಲ್ಲೆ  ಮಾಡಿದ ಹಿನ್ನಲೆಯಲ್ಲಿ  ಅಗತ್ಯ ಬಿದ್ದರೆ ಮತ್ತೆ ಅವರನ್ನು ರೌಡಿ ಪಟ್ಟಿಗೆ ಸೇರಿಸಲಾಗುವುದು  ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.


ಸುದ್ಧಿಗಾರರಂದಿಗೆ ಮಾತನಾಡಿದ ಅವರು, ‘ಕಂಪ್ಲಿ ಗಣೇಶ್‌ ಅವರನ್ನು ರಕ್ಷಣೆ ಮಾಡುವ ಯಾವುದೇ ಉದ್ದೇಶ ಸರಕಾರಕ್ಕೆ ಇಲ್ಲ. ಕಾನೂನು ಪ್ರಕಾರ ಅವರನ್ನು ರೌಡಿ ಪಟ್ಟಿಗೆ ಸೇರಿಸಬೇಕಾದ ಅನಿವಾರ್ಯತೆ ಎದುರಾದರೆ ಮರಳಿ ರೌಡಿಶೀಟ್‌ ತೆರೆಯಲಾಗುವುದು’ ಎಂದು ಹೇಳಿದ್ದಾರೆ.


ಹಾಗೇ ‘ಘಟನೆ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೇ ಇದ್ದುದರಿಂದ ಕಾಂಗ್ರೆಸ್‌ ನಾಯಕರು ವಿಭಿನ್ನ ಹೇಳಿಕೆ ನೀಡಿದ್ದಾರೆ. ಆದರೆ ಮಾಹಿತಿ ಲಭಿಸಿದ ಬಳಿಕ ಎಫ್‌ಐಆರ್‌ ದಾಖಲಾಗಿದ್ದು, ಗಣೇಶ್‌ ಅವರನ್ನು ಪಕ್ಷ ಅಮಾನತುಗೊಳಿಸಿದೆ. ಘಟನೆಯನ್ನು ನೋಡಿದ ಸಚಿವರು, ಶಾಸಕರನ್ನು ತನಿಖಾಧಿಕಾರಿಗಳು ಸಾಕ್ಷಿಗಳೆಂದು ಪರಿಗಣಿಸುತ್ತಾರೆ’ ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಶೋಕಾಚರಣೆ ದಿನ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕ