Publish Date: Sat, 21 Apr 2018 (08:57 IST)
Updated Date: Sat, 21 Apr 2018 (08:59 IST)
ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೇರುವುದು ನೂರಕ್ಕೆ ನೂರು ಪ್ರತಿಶತ ಸತ್ಯ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹಸಚಿವ ರಾಮಲಿಂಗಾ ರೆಡ್ಡಿ ಹೇಳಿಕೊಂಡಿದ್ದಾರೆ.
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಗೃಹ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಸಿಎಂ ಸಿದ್ದರಾಮಯ್ಯ ತಮ್ಮ ಕ್ಷೇತ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳಲ್ಲಿ ಬಹುಪಾಲು ಭರವಸೆಗಳನ್ನು ಪೂರೈಸಿದ್ದೇವೆ. ಈ ಬಾರಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಿಎಂ ಹೇಳಿದ್ದಾರೆ.
ಅತ್ತ ಗೃಹ ಸಚಿವ ರಾಮಲಿಂಗಾರೆಡ್ಡಿ ಕೂಡಾ ಇದೇ ಮಾತುಗಳನ್ನು ಪುನರುಚ್ಚರಿಸಿದ್ದು, ಕೊಟ್ಟ ಭರವಸೆಗಳನ್ನು ಪೂರೈಸಿದ ಸರ್ಕಾರ ಯಾವುದಾದರೂ ಇದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ. ಹಾಗಾಗಿ ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.