Webdunia - Bharat's app for daily news and videos

Install App

ಬಿಎಸ್‌ವೈ ತಿಪ್ಪರಲಾಗಾ ಹಾಕಿದ್ರೂ ಉಪಚುನಾವಣೆ ಗೆಲ್ಲಲ್ಲ: ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 10 ಮಾರ್ಚ್ 2017 (16:45 IST)
ಬಿಎಸ್‌ವೈ ತಿಪ್ಪರಲಾಗಾ ಹಾಕಿದ್ರೂ ಉಪಚುನಾವಣೆ ಗೆಲ್ಲಲ್ಲ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವೇ ಜಯಭೇರಿ ಬಾರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಉಪಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಗೆಲುವು ನಮ್ಮದೇ ಎಂದು ಹೇಳುತ್ತಿದ್ದಾರೆ. ಆದರೆ, ಅವರು ತಿಪ್ಪರಲಾಗಾ ಹಾಕಿದ್ರೂ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದರು.
 
ಉಪಚುನಾವಣೆ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗುವುದಿಲ್ಲ. ಮೈಸೂರಿನಲ್ಲಿ ಪಕ್ಷದ ಸಭೆ ಕರೆಯಲಾಗಿದ್ದು ಸಭೆಯಲ್ಲಿ ಚುನಾವಣೆ ರಣತಂತ್ರ ರೂಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ಬಿಜೆಪಿ ನಾಯಕರಿಗೆ ಕಾಮನ್‌ಸೆನ್ಸ್ ಇಲ್ಲ
 
ಪಂಚ ರಾಜ್ಯಗಳಲ್ಲಿ ಉಪ ಚುನಾವಣೆ ಘೋಷಣೆಯಾದಾಗ ಕೇಂದ್ರ ಸರಕಾರ ಬಜೆಟ್ ಮಂಡಿಸಲಿಲ್ಲವಾ? ಆವಾಗ ಬಿಜೆಪಿ ನಾಯಕರಿಗೆ ನೀತಿಸಂಹಿತೆಯ ಅರಿವಿರಲಿಲ್ಲವಾ. ಬಿಜೆಪಿ ನಾಯಕರಿಗೆ ಕಾಮನ್‌ಸೆನ್ಸ್ ಅನ್ನುವುದೇ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments