Webdunia - Bharat's app for daily news and videos

Install App

ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಜಯಭೇರಿ: ಉ‍ಪ ಚುನಾವಣೆ ಫಲಿತಾಂಶದ ಬಗ್ಗೆ ಮಧು ಬಂಗಾರಪ್ಪ ವಿಶ್ವಾಸ

Sampriya
ಶುಕ್ರವಾರ, 22 ನವೆಂಬರ್ 2024 (15:02 IST)
Photo Courtesy X
ಬೆಂಗಳೂರು: ಕರ್ನಾಟಕದಲ್ಲಿ ನಡೆದ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ, ಶಿಗ್ಗಾಂವಿಯಲ್ಲಿ ನಾನು ಪ್ರಚಾರ ಮಾಡಿದ್ದೇನೆ. ಗ್ರೌಂಡ್‌ನಲ್ಲಿ ಕೆಲಸ ಮಾಡಿದ್ದೇವೆ. ಎರಡು ಕ್ಷೇತ್ರದಲ್ಲಿ ವಾತಾವರಣ ಚೆನ್ನಾಗಿದೆ. ಸಮೀಕ್ಷೆಯಲ್ಲಿ ಎಲ್ಲರಿಗೂ ಒಂದೊಂದು ಸ್ಥಾನ ಕೊಟ್ಟಿದ್ದೀರಾ ಎಂದು ನಾಳೆ ಗೊತ್ತಾಗುತ್ತದೆ ಎಂದರು.

ಚನ್ನಪಟ್ಟಣದಲ್ಲಿ ಯೋಗೇಶ್ವರ್  ಲೋಕಲ್‌ನಲ್ಲಿ ಇರುವವರು ಕೆಲಸ ಮಾಡಿದ್ದಾರೆ. ಜನರು ಅವರ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯೋಗೇಶ್ವರ್ ಕಾಂಗ್ರೆಸ್‌ಗೆ ಬಂದಿದ್ದಕ್ಕೆ ಯಾರ ವಿರೋಧವೂ ಇಲ್ಲ. ಯೋಗೇಶ್ವರ್ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು.

ಸೋತರೂ ಗೆದ್ದರೂ ಯಾರು ಜನರ ಜೊತೆ ಇರುತ್ತಾರೋ ಅವರನ್ನ ಜನ ಗೆಲ್ಲಿಸುತ್ತಾರೆ ಎನ್ನುವ0 ವಿಶ್ವಾಸವಿದೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್  ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಜನ ಗ್ಯಾರಂಟಿಯಾಗಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎನ್ನುವ ವಿಶ್ವಾಸವಿದೆ. ಸಂಡೂರಿನಲ್ಲಿ ತುಕಾರಾಂ ಪತ್ನಿ ಕೂಡಾ ಗೆಲ್ಲುತ್ತಾರೆ ಎಂದರು.

ಉಪಚುನಾವಣೆ ರಾಜ್ಯ ರಾಜಕೀಯಕ್ಕೆ ದಿಕ್ಸೂಚಿ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಕಿಡಿಕಾರಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಿಗೆ ಏನು ಚಾಳಿ ಇದೆ ಗೊತ್ತಿಲ್ಲ. 136 ಜನ ಗೆದ್ದು ಹಳೆ ಚಾಳಿನಾ ಮತ್ತೆ ತರಲು ವ್ಯವಸ್ಥೆ ಮಾಡಿದರೆ ಅವರನ್ನು ಎಷ್ಟು ದಡ್ಡರು ಎಂದು ಹೇಳಬೇಕು ಗೊತ್ತಿಲ್ಲ. 136 ಜನರನ್ನ ಈ ರಾಜ್ಯದ ಜನರು ಮತ ಹಾಕಿ ಗೆಲ್ಲಿಸಿದ್ದಾರೆ. ಬಿಜೆಪಿಯನ್ನ ಹೀನಾಯವಾಗಿ ಸೋಲಿಸಿ ಗೆಲ್ಲಿಸಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments