Webdunia - Bharat's app for daily news and videos

Install App

ಕಾಂಗ್ರೆಸ್ ಹಣ, ಅಧಿಕಾರ, ತೋಳ್ಬಲದಿಂದ ಚುನಾವಣೆ ಗೆದ್ದಿದೆ: ಬಿಎಸ್‌ವೈ

Webdunia
ಸೋಮವಾರ, 17 ಏಪ್ರಿಲ್ 2017 (15:26 IST)
ಕಾಂಗ್ರೆಸ್ ಹಣ, ಅಧಿಕಾರ ತೋಳ್ಬಲದಿಂದ ಚುನಾವಣೆ ಗೆದ್ದಿದೆ. ಹೆಚ್ಚಿನ ಮತದಾರರು ಬಿಜೆಪಿ ಪರ ಒಲವು ಹೊಂದಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.  
 
ಗುಂಡ್ಲುಪೇಟೆಯಲ್ಲಿ ಆಯೋಜಿಸಲಾದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಇಲ್ಲಿನ ಜನರಿಗಿರುವ ಉತ್ಸಾಹವನ್ನು ಶಿಕಾರಿಪುರದಲ್ಲಿ ನೋಡಿರಲಿಲ್ಲ. ಕಾಂಗ್ರೆಸ್‌ನವರು ಹಣ ಚೆಲ್ಲಿ ಜಯಗಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಕಾಂಗ್ರೆಸ್ ಮತ್ತು ಜೆಡಿಎಸ್ ಒಳಒಪ್ಪಂದ ಮಾಡಿಕೊಂಡು ಬಿಜೆಪಿಯನ್ನು ಸೋಲಿಸಿವೆ. ಆದಾಗ್ಯೂ ಕ್ಷೇತ್ರದ ಶೇ.46 ರಷ್ಟು ಜನತೆ ನಮ್ಮೊಂದಿಗಿದ್ದಾರೆ. ಗುಂಡ್ಲುಪೇಟೆ, ನಂಜನಗೂಡಿನಲ್ಲಿ ಕರೆಂಟ್ ತೆಗೆದು ಹಣ ಹಂಚಲಾಗಿತ್ತು ಎಂದು ಆರೋಪಿಸಿದರು.
 
ಹಣ ಹಂಚುತ್ತಿದ್ದಾಗ ಕೆಎಸ್‌ಆರ್‌ಟಿಸಿ ಅಧಿಕಾರಿ ಸಿಕ್ಕುಬಿದ್ದಿದ್ದರು. ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ? ಸಿದ್ದರಾಮಯ್ಯ ಸರಕಾರ ಅಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಚುನಾವಣೆ ಗೆದ್ದಿರುವುದು ನಾಚಿಕೆಗೇಡಿತನದ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

India's Project Cheetah: Botswanaನಿಂದ ಮುಂದಿನ ತಿಂಗಳೇ ಬರಲಿದೆ ನಾಲ್ಕು ಚೀತಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

ಮುಂದಿನ ಸುದ್ದಿ
Show comments