Webdunia - Bharat's app for daily news and videos

Install App

ವಿದ್ಯಾರ್ಥಿನಿ ಬದಲು ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ: ಮಲ್ಲಿಕಾರ್ಜುನ ಖರ್ಗೆ ಒಡೆತನದ ಕಾಲೇಜಿನಲ್ಲಿ ಘಟನೆ

Krishnaveni K
ಗುರುವಾರ, 6 ಮಾರ್ಚ್ 2025 (14:20 IST)
ಕಲಬುರಗಿ: ಪಿಯು ವಿದ್ಯಾರ್ಥಿನಿ ಬದಲು ತಾನೇ ರಾಜ್ಯಶಾಸ್ತ್ರ ಪರೀಕ್ಷೆ ಬರೆದು ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಸಿಕ್ಕಿಬಿದಿದ್ದಾರೆ. ವಿಶೇಷವೆಂದರೆ ಮಲ್ಲಿಕಾರ್ಜುನ ಖರ್ಗೆ ಒಡೆತನದ ಮಿಲಿಂದ್ ಕಾಲೇಜಿನಲ್ಲಿ ಘಟನೆ ನಡೆದಿದೆ.

ದ್ವಿತೀಯ ಪಿಯು ಪರೀಕ್ಷೆ ಈಗ ಜಾರಿಯಲ್ಲಿದೆ. ನಿನ್ನೆ ರಾಜ್ಯಶಾಸ್ತ್ರ ಪರೀಕ್ಷೆ ನಡೆಯುತ್ತಿತ್ತು. ಮಿಲಿಂದ್ ಕಾಲೇಜಿನಲ್ಲಿ ಅರ್ಚನಾ ಎನ್ನುವ ವಿದ್ಯಾರ್ಥಿನಿ ಬದಲಿಗೆ ಕಾನೂನು ಪದವೀಧರೆಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣ ಪಾಟೀಲ್ ಎನ್ನುವವರು ಪರೀಕ್ಷೆ ಬರೆದಿದ್ದಾರೆ.

ವಿಶೇಷವೆಂದರೆ ದಲಿತ ನಾಯಕ ಎಂಬ ಖ್ಯಾತಿ ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಒಡೆತನದ ಕಾಲೇಜಿನಲ್ಲಿ ನಡೆದಿರುವ ಈ ಅಕ್ರಮವನ್ನು ದಲಿತ ಸೇನೆಯೇ ಬಯಲಿಗೆಳೆದಿದೆ. ಸದ್ಯಕ್ಕೆ ಆರೋಪಿ ಸಂಪೂರ್ಣ ಪಾಟೀಲ್ ರನ್ನು ಬಂಧಿಸಲಾಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ. ಖರ್ಗೆ ಕುಟುಂಬದವರ ಒಡೆತನದಲ್ಲೇ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಈ ಅಕ್ರಮವೆಸಗಿದ್ದಾರೆ ಎಂದರೆ ಸೂಕ್ತ ತನಿಖೆ ನಡೆದು ಶಿಕ್ಷೆಯಾಗಬಹುದೇ ಎಂದು ಅನೇಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments