Webdunia - Bharat's app for daily news and videos

Install App

ವಿದ್ಯಾರ್ಥಿನಿ ಬದಲು ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ: ಮಲ್ಲಿಕಾರ್ಜುನ ಖರ್ಗೆ ಒಡೆತನದ ಕಾಲೇಜಿನಲ್ಲಿ ಘಟನೆ

Krishnaveni K
ಗುರುವಾರ, 6 ಮಾರ್ಚ್ 2025 (14:20 IST)
ಕಲಬುರಗಿ: ಪಿಯು ವಿದ್ಯಾರ್ಥಿನಿ ಬದಲು ತಾನೇ ರಾಜ್ಯಶಾಸ್ತ್ರ ಪರೀಕ್ಷೆ ಬರೆದು ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಸಿಕ್ಕಿಬಿದಿದ್ದಾರೆ. ವಿಶೇಷವೆಂದರೆ ಮಲ್ಲಿಕಾರ್ಜುನ ಖರ್ಗೆ ಒಡೆತನದ ಮಿಲಿಂದ್ ಕಾಲೇಜಿನಲ್ಲಿ ಘಟನೆ ನಡೆದಿದೆ.

ದ್ವಿತೀಯ ಪಿಯು ಪರೀಕ್ಷೆ ಈಗ ಜಾರಿಯಲ್ಲಿದೆ. ನಿನ್ನೆ ರಾಜ್ಯಶಾಸ್ತ್ರ ಪರೀಕ್ಷೆ ನಡೆಯುತ್ತಿತ್ತು. ಮಿಲಿಂದ್ ಕಾಲೇಜಿನಲ್ಲಿ ಅರ್ಚನಾ ಎನ್ನುವ ವಿದ್ಯಾರ್ಥಿನಿ ಬದಲಿಗೆ ಕಾನೂನು ಪದವೀಧರೆಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣ ಪಾಟೀಲ್ ಎನ್ನುವವರು ಪರೀಕ್ಷೆ ಬರೆದಿದ್ದಾರೆ.

ವಿಶೇಷವೆಂದರೆ ದಲಿತ ನಾಯಕ ಎಂಬ ಖ್ಯಾತಿ ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಒಡೆತನದ ಕಾಲೇಜಿನಲ್ಲಿ ನಡೆದಿರುವ ಈ ಅಕ್ರಮವನ್ನು ದಲಿತ ಸೇನೆಯೇ ಬಯಲಿಗೆಳೆದಿದೆ. ಸದ್ಯಕ್ಕೆ ಆರೋಪಿ ಸಂಪೂರ್ಣ ಪಾಟೀಲ್ ರನ್ನು ಬಂಧಿಸಲಾಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ. ಖರ್ಗೆ ಕುಟುಂಬದವರ ಒಡೆತನದಲ್ಲೇ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಈ ಅಕ್ರಮವೆಸಗಿದ್ದಾರೆ ಎಂದರೆ ಸೂಕ್ತ ತನಿಖೆ ನಡೆದು ಶಿಕ್ಷೆಯಾಗಬಹುದೇ ಎಂದು ಅನೇಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments