Webdunia - Bharat's app for daily news and videos

Install App

ಜಗದೀಶ್‌ ಶೆಟ್ಟರ್‌ ನಿರ್ಗಮನದಿಂದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಸಂತಸ

geetha
ಶುಕ್ರವಾರ, 26 ಜನವರಿ 2024 (18:08 IST)
ಬೆಂಗಳೂರು :  ಕೆಪಿಸಿಸಿ ಭವನದಲ್ಲಿ  ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ  ಡಿಸಿಎಂ ಡಿ.ಕೆ. ಶಿವಕುಮಾರ್‌ ಇಷ್ಟು ದಿನ ಜಗದೀಶ್‌ ಶೆಟ್ಟರ್‌ ಅವರನ್ನು ಕರೆತಂದಿದ್ದಕ್ಕೆ ಅಲ್ಪಸಂಖ್ಯಾತರು, ದಲಿತರು ಹಾಗೂ ಮತ್ತಿತರ ವರ್ಗಗಳಿಂದ ವಿರೋಧದಿಂದಾಗಿ ಮುಜುಗರ ಎದುರಿಸುತ್ತಿದ್ದ ಕಾರ್ಯಕರ್ತರಿಗೆ ಈಗ ನಿರಾಳವಾಗಿದೆ ಎಂದರು. ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ತೊರೆದು ಮತ್ತೆ ಬಿಜೆಪಿ ಪಕ್ಷಕ್ಕೆ ಸೇರಿರುವುದರಿಂದ ಕಾಂಗ್ರೆಸ್‌ ಕಾರ್ಯಕರ್ತರು ಅತ್ಯಂತ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬಿಜೆಪಿಯಲ್ಲಿ ನಡೆದ ಆಂತರಿಕ ಕಚ್ಚಾಟದಿಂದಾಗಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಪಕ್ಷಕ್ಕೆ ಬೇಷರತ್ತಾಗಿ ಸೇರ್ಪಡೆಯಾಗಿದ್ದರು. ನಾವೂ ಸಹ ಅವರ ಹಿರಿತನವನ್ನು ಪರಿಗಣಿಸಿ ನಮ್ಮ ಕಾರ್ಯಕರ್ತರಿಗೆ ದ್ರೋಹ ಮಾಡಿ ಅವರಿಗೆ ಟಿಕೆಟ್‌ ನೀಡಿದೆವು. ಆದರೂ ಅವರು 35000 ಮತಗಳ ಅಂತರದಿಂದ ಸೋತರು. ಆದರೂ ಮಾಜಿ ಸಿಎಂ ಎಂಬ ಗೌರವದಿಂದ ನಾವು ವಿಧಾನ ಪರಿಷತ್‌ ಸ್ಥಾನ ನೀಡಿದ್ದೆವು .ಕಳೆದ ಮೂರು ತಿಂಗಳಿಂದ ಅವರು ಬಿಜೆಪಿ ನಾಯಕರೊಡನೆ ಸಂಪರ್ಕ ಹೊಂದಿರುವ ವಿಷಯ ತಿಳಿದಿದ್ದರೂ ಸುಮ್ಮನಿದ್ದವು ಎಂದು ಡಿಕೆಶಿ ಹೇಳಿದರು 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments