Publish Date: Mon, 13 Jul 2020 (21:46 IST)
Updated Date: Mon, 13 Jul 2020 (21:47 IST)
ಕೊರೊನಾ ವೈರಸ್ ಪೀಡಿತರಿಗೆ ಕಾಂಗ್ರೆಸ್ ಸಂಸದ ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.
ರಾಮನಗರ ನಗರದ ಕಂದಾಯ ಭವನದಲ್ಲಿನ ಕೋವಿಡ್ -19 ರೆಫರಲ್ ಆಸ್ಪತ್ರೆಗೆ ಸಂಸದ ಡಿ.ಕೆ.ಸುರೇಶ್ ಭೇಟಿ ನೀಡಿ ಸೋಂಕಿತರೊಂದಿಗೆ ಮಾತನಾಡಿ, ಅವರೆಲ್ಲ ಬೇಗ ಗುಣಮುಖರಾಗುವಂತೆ ಶುಭ ಹಾರೈಸಿದರು.
ಡಿಸಿ ಕಚೇರಿಗೆ ಭೇಟಿ ನೀಡಿದ ಸಂಸದರು, ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ನಂತರ ಪಿಪಿಇ ಕಿಟ್ ಧರಿಸಿದ ಸಂಸದ ಡಿ.ಕೆ.ಸುರೇಶ್, ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಮತ್ತು ಸಂಸದರ ಸಹಾಯಕರು ಕೋವಿಡ್ 19 ಆಸ್ಪತ್ರೆಯಲ್ಲಿ ಸೋಂಕಿತರ ವಾರ್ಡುಗಳಿಗೆ ಭೇಟಿ ಕೊಟ್ಟು ಅವರಲ್ಲಿ ಆತ್ಮ ಸ್ಥೈರ್ಯ ತುಂಬಿದ್ದಾರೆ.