Webdunia - Bharat's app for daily news and videos

Install App

ಲೂಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ಚಂಬಲ್ ಕಣಿವೆ ಡಕಾಯಿತರನ್ನು ಮೀರಿಸಿದೆ: ಸಿಟಿ ರವಿ

Sampriya
ಮಂಗಳವಾರ, 8 ಏಪ್ರಿಲ್ 2025 (17:26 IST)
Photo Courtesy X
ಮಂಡ್ಯ: ದಿನದಿಂದ ದಿನಕ್ಕೆ ಹಾಲು, ವಿದ್ಯುತ್‌, ಪೆಟ್ರೋಲ್‌ ಸೇರಿದಂತೆ 50ಕ್ಕೂ ಹೆಚ್ಚಿನ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಇದರಿಂದ ಲೂಟಿ ಮಾಡುವಲ್ಲಿ ಚಂಬಲ್‌ ಕಣಿವೆ ದರೋಡೆಕೋರರನ್ನೂ ಕಾಂಗ್ರೆಸ್ಸಿಗರು ಮೀರಿಸಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ಆರೋಪಿಸಿದರು.

ನಗರದ ಸರ್‌.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಸಂಜಯ ಸರ್ಕಲ್‌ವರೆಗೆ ಮಂಗಳವಾರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಜನಾಕ್ರೋಶ ಯಾತ್ರೆಯಲ್ಲಿ ಅವರು ಮಾತನಾಡಿದರು.

ಮೈಸೂರು ಮಹಾರಾಜರಿಗಿಂತ ಸಿದ್ದರಾಮಯ್ಯ ದೊಡ್ಡವರು ಅಂತ ಹೇಳುತ್ತಾರೆ. ಆದರೆ ಮಹಾರಾಜರು ತಮ್ಮ ಪತ್ನಿ ಒಡವೆಗಳನ್ನು ಒತ್ತೆ ಇಟ್ಟು ಕೆಆರ್‌ಎಸ್‌ ಅಣೆಕಟ್ಟೆ ಕಟ್ಟಿಸಿದ್ದಾರೆ. ಆದರೆ, ಸಿದ್ದರಾಮಯ್ಯನವರು ತಮ್ಮ ಪತ್ನಿ ಹೆಸರಿನಲ್ಲಿ 14 ‘ಮುಡಾ’ ನಿವೇಶನಗಳನ್ನು ಹೊಡೆದುಕೊಂಡ್ರು. ಮಹಾರಾಜ ವಂಶಸ್ಥರಿಗೆ ಇವರು ನೀಡುತ್ತಿರುವ ಕಿರುಕುಳಕ್ಕೆ ದೇವರು ಮೆಚ್ಚುತ್ತಾನಾ. ಆಸ್ತಿ ಲೂಟಿ ಮಾಡಿದವರು ಮಹಾರಾಜರ ಸಮಾನರಾಗುತ್ತಾರಾ ಎಂದು ಪ್ರಶ್ನೆ ಮಾಡಿದರು.

ತಮಿಳುನಾಡಿಗೆ ಅಗತ್ಯಕ್ಕಿಂತ ಹೆಚ್ಚು ನೀರು ಬಿಟ್ಟ ರಾಜ್ಯಕ್ಕೆ ಮಾರಿಯಾಗಿರುವ ಕಾಂಗ್ರೆಸ್ ಸರ್ಕಾರ ತಮಿಳುನಾಡಿನವರಿಗೆ ಉಪಕಾರಿಯಾಗಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments