Select Your Language

Notifications

webdunia
webdunia
webdunia
webdunia

ನಿಗಮ ಮಂಡಳಿ ನೇಮಕಾತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್!

ನಿಗಮ ಮಂಡಳಿ ನೇಮಕಾತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್!
ನವದೆಹಲಿ , ಸೋಮವಾರ, 24 ಅಕ್ಟೋಬರ್ 2016 (17:48 IST)
ನಿಗಮ ಮಂಡಳಿ ನೇಮಕಾತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.
 
ನಿಗಮ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯನವರು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕ ಮಾಡುವ ಕುರಿತು ಪಟ್ಟಿ ನೀಡಿದ್ದೇವೆ. ಅವರು ಅನುಮೋದನೆ ನೀಡಿದ ಬಳಿಕ ನೇಮಕಾತಿ ಮಾಡುವುದಾಗಿ ಮಾಹಿತಿ ನೀಡಿದ್ದಾರೆ.
 
ನಿಗಮ ಮಂಡಳಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕಾತಿ ಪಟ್ಟಿಯಲ್ಲಿ ಹಾಲಿ ಶಾಸಕರ ಹೆಸರನ್ನು ಸೇರಿಸಿದ್ದು, 20 ಜನ ಶಾಸಕರಿಗೆ ಸ್ಥಾನ ನೀಡುವುದು ಖಚಿತ ಎಂದು ಹೇಳಿದರು.
 
ವಿಧಾನಸೌಧದ ಬಳಿ ಸಿಕ್ಕ ಕೋಟಿ ಕೋಟಿ ಹಣದ ಕುರಿತು ಆದಾಯ ಇಲಾಖೆ ಅಧಿಕಾರಿಗಳು ತನಿಗೆ ನಡೆಸುತ್ತಿದ್ದಾರೆ. 2.5 ಕೋಟಿ ರೂಪಾಯಿ ಹಣವನ್ನು ಯಾರಿಗೆ ನೀಡಲು ತಂದಿದ್ದರು ಎನ್ನುವುದರ ಕುರಿತು ಸಧ್ಯದಲ್ಲಿಯೇ ತಿಳಿದು ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಹೃದಯದಿಂದ ಗುಜರಾತಿ: ರಾಷ್ಟ್ರಪತಿ ಪ್ರಣವ್ ಮುಖರ್ಜಿ