Refresh

This website m-kannada.webdunia.com/article/karnataka-news/congrss-mla-support-to-ravi-119021900027_1.html is currently offline. Cloudflare's Always Online™ shows a snapshot of this web page from the Internet Archive's Wayback Machine. To check for the live version, click Refresh.

Select Your Language

Notifications

webdunia
webdunia
webdunia
webdunia

ರವಿ ಸಿಗರೇಟ್ ಸೇದಲ್ಲ, ಕುಡಿಯಲ್ಲ, ಡ್ರೈವಿಂಗ್ ಬರಲ್ಲ-ಸಿ.ಟಿ.ರವಿ ಪರವಾಗಿ ಬ್ಯಾಟ್ ಬೀಸಿದ ಕಾಂಗ್ರೆಸ್ ಶಾಸಕ

ಬೆಂಗಳೂರು
ಬೆಂಗಳೂರು , ಮಂಗಳವಾರ, 19 ಫೆಬ್ರವರಿ 2019 (11:21 IST)
ಬೆಂಗಳೂರು : ಶಾಸಕ ಸಿ.ಟಿ.ರವಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಬಿಜೆಪಿ ಶಾಸಕ ಸಿ.ಟಿ.ರವಿ ಪರವಾಗಿ ಬ್ಯಾಟ್ ಬೀಸಿದ್ದಾರೆ.


ಕುಣಿಗಲ್ ತಾಲೂಕಿನ ಉರ್ಕೇಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಾಸಕ ಸಿಟಿ ರವಿ ಕಾರು ಮೂತ್ರ ವಿಸರ್ಜನೆ ಮಾಡುತ್ತಿದ್ದ ಇಬ್ಬರು ಯುವಕರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮೃತರ ಸ್ನೇಹಿತನೊಬ್ಬ ಶಾಸಕರು ಮದ್ಯಪಾನ ಮಾಡಿ ಕಾರು ಚಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.


ಈ ಬಗ್ಗೆ  ಪ್ರತಿಕ್ರಿಯಿಸಿದ ಶಾಸಕ ಆನಂದ್ ಸಿಂಗ್ ಅವರು,’ ಅಪಘಾತದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನಾನು ಟಿವಿ ನೋಡಿ ಬಂದಿದ್ದೇನೆ. ರವಿ ಸಿಗರೇಟ್ ಸೇದಲ್ಲ, ಕುಡಿಯುವುದಿಲ್ಲ ಹಾಗೂ ಅವರು ಗಾಡಿ ಓಡಿಸುವುದಿಲ್ಲ. ರವಿ ಅವರು ಬೆಳಗ್ಗೆ ಎದ್ದು ಯೋಗ ಮಾಡುವವರು. ಈ ರೀತಿ ಅವರು ಏನೂ ಮಾಡಲ್ಲ. ಅವರು ನನ್ನನ್ನು ನೋಡಲು ಬಂದಿದ್ದರು. ಆದ್ದರಿಂದ ಅವರನ್ನು ನೋಡಲು ನಾನು ಹೋಗುತ್ತಿದ್ದೇನೆ’ ಎಂದು ಅವರ ಪರವಾಗಿ ಮಾತನಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪುಲ್ವಾಮಾ ದಾಳಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕಮಲ್ ಹಾಸನ್