Webdunia - Bharat's app for daily news and videos

Install App

ರವಿ ಸಿಗರೇಟ್ ಸೇದಲ್ಲ, ಕುಡಿಯಲ್ಲ, ಡ್ರೈವಿಂಗ್ ಬರಲ್ಲ-ಸಿ.ಟಿ.ರವಿ ಪರವಾಗಿ ಬ್ಯಾಟ್ ಬೀಸಿದ ಕಾಂಗ್ರೆಸ್ ಶಾಸಕ

Webdunia
ಮಂಗಳವಾರ, 19 ಫೆಬ್ರವರಿ 2019 (11:21 IST)
ಬೆಂಗಳೂರು : ಶಾಸಕ ಸಿ.ಟಿ.ರವಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಬಿಜೆಪಿ ಶಾಸಕ ಸಿ.ಟಿ.ರವಿ ಪರವಾಗಿ ಬ್ಯಾಟ್ ಬೀಸಿದ್ದಾರೆ.


ಕುಣಿಗಲ್ ತಾಲೂಕಿನ ಉರ್ಕೇಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಾಸಕ ಸಿಟಿ ರವಿ ಕಾರು ಮೂತ್ರ ವಿಸರ್ಜನೆ ಮಾಡುತ್ತಿದ್ದ ಇಬ್ಬರು ಯುವಕರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮೃತರ ಸ್ನೇಹಿತನೊಬ್ಬ ಶಾಸಕರು ಮದ್ಯಪಾನ ಮಾಡಿ ಕಾರು ಚಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.


ಈ ಬಗ್ಗೆ  ಪ್ರತಿಕ್ರಿಯಿಸಿದ ಶಾಸಕ ಆನಂದ್ ಸಿಂಗ್ ಅವರು,’ ಅಪಘಾತದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನಾನು ಟಿವಿ ನೋಡಿ ಬಂದಿದ್ದೇನೆ. ರವಿ ಸಿಗರೇಟ್ ಸೇದಲ್ಲ, ಕುಡಿಯುವುದಿಲ್ಲ ಹಾಗೂ ಅವರು ಗಾಡಿ ಓಡಿಸುವುದಿಲ್ಲ. ರವಿ ಅವರು ಬೆಳಗ್ಗೆ ಎದ್ದು ಯೋಗ ಮಾಡುವವರು. ಈ ರೀತಿ ಅವರು ಏನೂ ಮಾಡಲ್ಲ. ಅವರು ನನ್ನನ್ನು ನೋಡಲು ಬಂದಿದ್ದರು. ಆದ್ದರಿಂದ ಅವರನ್ನು ನೋಡಲು ನಾನು ಹೋಗುತ್ತಿದ್ದೇನೆ’ ಎಂದು ಅವರ ಪರವಾಗಿ ಮಾತನಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments