Select Your Language

Notifications

webdunia
webdunia
webdunia
webdunia

ಸಂವಿಧಾನ ಪ್ರತಿ ಸುಟ್ಟ ದೇಶ ದ್ರೋಹಿಗಳ ವಿರುದ್ಧ ಪ್ರತಿಭಟನೆ

ಸಂವಿಧಾನ
ದೆಹಲಿಯಲ್ಲಿ ದೇಶದ್ರೋಹಿಗಳು ಸಂವಿಧಾನ ಪ್ರತಿ ಸುಟ್ಟಿರುವುದನ್ನು ಖಂಡಿಸಿ ಪ್ರತಿಭಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ನಾಯ್ಕಲ್ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ದಲಿತ ಸಂಘಟನೆಗಳ ನೂರಾರು ಕಾರ್ಯಕರ್ತರು ರಸ್ತೆ ತಡೆದು ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದರು. ಸಂವಿಧಾನ ಪ್ರತಿ ಸುಟ್ಟು ಅವಮಾನ ಮಾಡಿದ್ದ ಕಿಡಿಗೇಡಿಗಳನ್ನು ಬಂಧಿಸಬೇಕು. ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು. ಭಾರತ ಸಂವಿಧಾನವನ್ನು ಸುಟ್ಟಿರುವುದು ದೇಶಕ್ಕೆ ಒಳೆಯದಲ್ಲ. ಇಂತಹ ದೇಶ ವಿರೋಧಿಗಳನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆದ ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು.



 

Share this Story:

Follow Webdunia kannada

ಮುಂದಿನ ಸುದ್ದಿ

ವಿ ಆರ್ ಎಲ್ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ