ಬೆಂಗಳೂರಿನ ಮಾವಳ್ಳಿಪುರದಲ್ಲಿ ಬೃಹತ್‌ ಸ್ಪೊರ್ಟ್ಸ್‌ ಸಿಟಿ ನಿರ್ಮಾಣ

geetha
ಬುಧವಾರ, 14 ಫೆಬ್ರವರಿ 2024 (17:06 IST)
ಬೆಂಗಳೂರು :  ಬುಧವಾರ ಬಜೆಟ್‌ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ  ಶಾಸಕ ಎಸ್.ಆರ್‌.ವಿಶ್ವನಾಥಅವರ  ಪ್ರಶ್ನೆಗೆ ಉತ್ತರಿಸುತ್ತಾ ,  ನಿಗದಿತ ಪ್ರದೇಶದಲ್ಲಿ ಸುಸಜ್ಜಿತವಾದ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಹಾಗೂ ಎಲ್ಲ ಕ್ರೀಡೆಗಳು ಒಂದೇ ವೇದಿಕೆಯಡಿ ಬರುವಂತ ಕ್ರೀಡಾ ಸಿಟಿ ನಿರ್ಮಾಣ ಮಾಡಲಾಗುವುದು ಎಂದು ಅವರು ಕ್ರೀಡಾ ಸಚಿವ  ಬಿ.ನಾಗೇಂದ್ರ  ಹೇಳಿದ್ದಾರೆ.
 
ಯಲಹಂಕದ  ಮಾವಳ್ಳಿಪುರ  ಬಳಿ 100 ಎಕರೆ ಪ್ರದೇಶದಲ್ಲಿ ಹೈಟೆಕ್ ‌ ಸ್ಪೋರ್ಟ್ಸ್‌ ಸಿಟಿ ನಿರ್ಮಿಸಲಾಗುವುದು ಎಂದು ಕ್ರೀಡಾ ಸಚಿವ  ಬಿ.ನಾಗೇಂದ್ರ ಹೇಳಿದ್ದಾರೆ.ಕ್ರೀಡಾ ಸಿಟಿ ನಿರ್ಮಿಸಿದರೇ ನಿಮ್ಮನ್ನು ಬೆಳ್ಳಿರಥದಲ್ಲಿ ಮೆರವಣಿಗೆ ಮಾಡಿಸುವುದಾಗಿ ಶಾಸಕ ವಿಶ್ವನಾಥ ಅವರು ಸಚಿವ ನಾಗೇಂದ್ರ ಅವರಿಗೆ ಹೇಳಿದರು ಇದಕ್ಕೆ ಪ್ರತಿಯಾಗಿ ಸಚಿವ ನಾಗೇಂದ್ರ ಅವರು ಉದ್ಘಾಟನೆ ದಿನದಂದು ನಾವು ಕಬ್ಬಡ್ಡಿ ಆಡೋಣ ಎಂದಾಗ  ಸದನ ನಗೆಗಡಲಲ್ಲಿ ತೇಲಿತು.

ಮಾವಳ್ಳಿಪುರ ಬಳಿ 60 ಎಕರೆ ಜಮೀನು ನೀಡಲು ಕಂದಾಯ ಇಲಾಖೆ ಒಪ್ಪಿಕೊಂಡಿದ್ದು;ಇದರ ಜೊತೆಗೆ ಇನ್ನೂ ಹೆಚ್ಚುವರಿಯಾಗಿ 40 ಎಕರೆ ಜಾಗ ನೀಡುವಂತೆ ಕೇಳಿಕೊಳ್ಳಲಾಗಿದೆ. ಅದನ್ನು ಪಡೆದುಕೊಂಡು ಸಂಪುಟ ಸಭೆ ಒಪ್ಪಿಗೆ ಪಡೆದುಕೊಂಡು ಸರಕಾರದಿಂದ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ಯಾವುದಾದರೂ ಸರಿ ಈ ಕ್ರೀಡಾಸಿಟಿ ನಿರ್ಮಿಸುವುದಾಗಿ ನಾಗೇಂದ್ರ ಹೇಳಿದ್ದಾರೆ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಮುಂದಿನ ಸುದ್ದಿ
Show comments