ಪಾರ್ಕ್ ಮೈದಾನಗಳಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣ

Webdunia
ಗುರುವಾರ, 11 ನವೆಂಬರ್ 2021 (20:28 IST)
ಬೆಂಗಳೂರು: ಪಾರ್ಕ್, ಮೈದಾನಗಳಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣದ ಸರ್ವೆ ವರದಿ ಸಲ್ಲಿಸದ ಬಿಡಿಎ, ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್ ಒಂದಿಬ್ಬರನ್ನು ಜೈಲಿಗೆ ಕಳುಹಿಸಿದರೆ ಪರಿಸ್ಥಿತಿ ಸುಧಾರಿಸಲಿದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದೆ.
ಕಾನೂನು ಸೇವೆಗಳ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತೆ ಅವರ ವಿಭಾಗೀಯ ಪೀಠ ಕೋರ್ಟ್ ಆದೇಶವನ್ನು ಸಂಸ್ಥೆಗಳು ಲಘುವಾಗಿ ಪರಿಗಣಿಸುತ್ತಿವೆ. ಒಂದಿಬ್ಬರನ್ನು ಜೈಲಿಗೆ ಕಳುಹಿಸಿದರೆ ಎಲ್ಲವೂ ಸರಿಹೋಗುತ್ತದೆ. ನ್ಯಾಯಾಲಯ ಘನತೆಯ ವಿಷಯದಲ್ಲಿ ರಾಜಿಯಾಗುವುದಿಲ್ಲ. ಬಿಬಿಎಂಪಿ ಮುಖ್ಯ ಆಯುಕ್ತರನ್ನು ಜೈಲಿಗೆ ಕಳುಹಿಸಬೇಕಾದೀತು ಎಚ್ಚರ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಪಾರ್ಕ್, ಮೈದಾನಗಳಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ದೊಡ್ಡವರ ವಿರುದ್ಧ ಕ್ರಮ ಕೈಗೊಳ್ಳಲು ನೀವು ಹಿಂಜರಿಯಬಹುದು. ಆದರೆ, ನಾವು ಹಿಂಜರಿಯುವುದಿಲ್ಲ. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಅಧಿಕಾರಿಗಳಿಗೆ ತೊಂದರೆ ಖಚಿತ ಎಂಬ ಎಚ್ಚರಿಕೆಯನ್ನು ನ್ಯಾಯಪೀಠ ನೀಡಿದೆ.
ಮೈದಾನಗಳಲ್ಲಿ ಅಕ್ರಮ ಕಟ್ಟಡಗಳ ಸರ್ವೆ ಸಂಬಂಧ ವರದಿ ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಬೇಕೆಂದು ಬಿಬಿಎಂಪಿ ಪರಿಪರಿಯಾಗಿ ಮನವಿ ಮಾಡಿಕೊಂಡಿತು. ಸರ್ವೆ ವರದಿ ಸಲ್ಲಿಕೆಗೆ ಕೊನೆ ಅವಕಾಶ ನೀಡುತ್ತಿದ್ದೇವೆ ಎಂದು ಹೇಳಿದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮುಂದಿನ ಸುದ್ದಿ
Show comments