ಬಹುನಿರೀಕ್ಷಿತ ಕಾರಂತ ಬಡಾವಣೆ ನಿರ್ಮಾಣಕ್ಕೆ ಚಾಲನೆ

Webdunia
ಗುರುವಾರ, 15 ಡಿಸೆಂಬರ್ 2022 (21:46 IST)
ಬಹುನಿರೀಕ್ಷಿತ ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಇಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಭೂಮಿಪೂಜೆ ನೆರವೇರಿಸಿದರು. ಯಲಹಂಕ ವಿಧಾನಸಭಾ ಕ್ಷೇತ್ರದ 17 ಗ್ರಾಮಗಳ 3546 ಎಕರೆ ಪ್ರದೇಶದಲ್ಲಿ ಸುಮಾರು 22 ಸಾವಿರ ನಿವೇಶನಗಳನ್ನು ನಿರ್ಮಾಣ ಮಾಡಿ ರೈತರು ಮತ್ತು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಗುರಿಯೊಂದಿಗೆ ರಾಜ್ಯ ಸರ್ಕಾರ ಮತ್ತು ಬಿಡಿಎದ ಮಹತ್ವಾಕಾಂಕ್ಷೆಯ ಈ ಯೋಜನೆಗೆ ಅಧಿಕೃತವಾಗಿ ಚಾಲನೆ ದೊರೆತಂತಾಗಿದೆ. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ವಿಶ್ವನಾಥ್ ಅವರು, ಈ ಹಿಂದಿನ ಬಡಾವಣೆಗಳಂತೆ ಇದು ಸಹ ಆಗುತ್ತದೆ ಎನ್ನುವ ಆತಂಕ ಇತ್ತು. ಆದರೆ, ಸುಪ್ರಿಂ ಕೋರ್ಟ್ ಸಮಿತಿಯೊಂದನ್ನು ರಚಿಸಿ ಬಡಾವಣೆ ನಿರ್ಮಿಸಲು ಅನುಮತಿ ನೀಡಿದೆ ಎಂದರು. ರೈತರು ತಮಗೆ ಹಣದ ರೂಪದಲ್ಲಿ ಅಥವಾ 60:40 ಅನುಪಾತದಲ್ಲಿ ಅಭಿವೃದ್ಧಿ ಪಡಿಸಿದ ನಿವೇಶನಗಳನ್ನು ಪಡೆಯಬಹುದಾಗಿದೆ. ಯಾವುದೇ ಸಮಸ್ಯೆಗಳಿದ್ದರೂ ಬಿಡಿಎ ಜೊತೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎಂದು ರೈತರಿಗೆ ಮನವಿ ಮಾಡಿದ ಅವರು, ಈ ವಿಚಾರದಲ್ಲಿ ರೈತರೊಂದಿಗೆ ನಾನು ಕೈಜೋಡಿಸುತ್ತೇನೆ. ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments