Webdunia - Bharat's app for daily news and videos

Install App

1 ಸಾವಿರ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಗ್ರಾಹಕ ಕೋರ್ಟ್ ಆದೇಶ

Webdunia
ಸೋಮವಾರ, 15 ನವೆಂಬರ್ 2021 (20:58 IST)
ಬೆಂಗಳೂರು: ಹಿರಿಯ ನಾಗರಿಕರೊಬ್ಬರನ್ನು ನಿಗದಿತ ನಿಲ್ದಾಣದಿಂದ ಹತ್ತಿಸಿಕೊಳ್ಳದೆ ಬಿಟ್ಟು ಬಂದಿದ್ದಕ್ಕೆ 1 ಸಾವಿರ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಗ್ರಾಹಕ ಕೋರ್ಟ್ ಆದೇಶಿಸಿದೆ.
ಟಿಕೆಟ್ ಕಾಯ್ದಿರಿಸಿದ್ದರೂ ತಮ್ಮನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಬಂದಿದ್ದಾರೆ. ಇದರಿಂದಾಗಿ ತಾವು ತಮಿಳುನಾಡಿನಿಂದ ಎರಡು ಬಸ್‌ಗಳನ್ನು ಬದಲಿಸಿ ಬರುವಂತಾಯಿತು ಎಂದು ಬೆಂಗಳೂರಿನ ಬನಶಂಕರಿ ನಿವಾಸಿ ಎಸ್. ಸಂಗಮೇಶ್ವರನ್ ನಗರದ 2ನೇ ಹೆಚ್ಚುವರಿ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿದ್ದರು.
ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿದಾರರಿಗೆ ಅವರು ಬದಲಿ ಬಸ್​​​ನಲ್ಲಿ ಬಂದ ವೆಚ್ಚ ಭರಿಸುವಂತೆ ಹಾಗೂ ಅವರಿಗೆ ಆಗಿರುವ ಹಿಂಸೆಗೆ 1 ಸಾವಿರ ಪರಿಹಾರ ಪಾವತಿಸುವಂತೆ ನಿಗಮಕ್ಕೆ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ : ಬನಶಂಕರಿ 3ನೇ ಹಂತದ ನಿವಾಸಿಯಾಗಿರುವ ಎಸ್ ಸಂಗಮೇಶ್ವರನ್ ಅವರು ಬೆಂಗಳೂರಿನಿಂದ ತಮಿಳುನಾಡಿನ ತಿರುವಣ್ಣಾಮಲೈಗೆ ಹೋಗಿ ಬರಲು ಕೆಎಸ್‌ಆರ್‌ಟಿಸಿ ಐರಾವತ್ ಕ್ಲಬ್ ಕ್ಲಾಸ್‌ ಟಿಕೆಟ್​​ ಅನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡಿದ್ದರು. ಅದರಂತೆ, 2019ರ ಅಕ್ಟೋಬರ್ 12ರಂದು ಬೆಂಗಳೂರಿನಿಂದ ಹೊರಟು ಮರುದಿನ ನಗರಕ್ಕೆ ಹಿಂತಿರುಗಬೇಕಿತ್ತು. ಅದಕ್ಕಾಗಿ ಮಧ್ಯಾಹ್ನದ ಹೊತ್ತಿಗೆ ಗೊತ್ತುಪಡಿಸಿದ ಬಸ್ ನಿಲ್ದಾಣವನ್ನು ತಲುಪಿದರು. ಒಂದು ಗಂಟೆಗೂ ಹೆಚ್ಚು ಕಾಲ ಕಾದರೂ ಬಸ್‌ನ ಸುಳಿವೇ ಇರಲಿಲ್ಲ.
ಈ ಹಿನ್ನೆಲೆಯಲ್ಲಿ ಸಂಗಮೇಶ್ವರನ್ ಟಿಕೆಟ್ ಬುಕ್ಕಿಂಗ್ ಟೈಮ್‌ನಲ್ಲಿ ಬಂದಿದ್ದ ಎಸ್ಎಂಎಸ್‌ನಲ್ಲಿದ್ದ ಕಂಡಕ್ಟರ್ ನಂಬರ್‌ಗೆ ಫೋನ್ ಮಾಡಿದ್ದರು. ಕರೆ ಸ್ವೀಕರಿಸಿದ ಕಂಡಕ್ಟರ್, ಬಸ್ ತಿರುವಣ್ಣಾಮಲೈ ನಿಲ್ದಾಣಕ್ಕೆ ಬರಲಿಲ್ಲ. ಪೊಲೀಸರ ಸೂಚನೆಯಂತೆ ಪಿಕಪ್ ಪಾಯಿಂಟ್ ಬದಲಾಗಿತ್ತು. ಅದರಂತೆ ಹೊಸ ತಾತ್ಕಾಲಿಕ ನಿಲ್ದಾಣದಿಂದ ಬೆಂಗಳೂರಿನ ಕಡೆಗೆ ಬಸ್‌ ಹೊರಟಿದ್ದಾಗಿದೆ ಎಂದರು.
ಪ್ರಕರಣದಲ್ಲಿ ಖುದ್ದು ಸಂಗಮೇಶ್ವರನ್ ತಮ್ಮ ವಾದವನ್ನು ಮಂಡಿಸಿದರು, ವಾದ ಅಲ್ಲಗಳೆದ ಕೆಎಸ್ಆರ್‌ಟಿಸಿ ಪರ ವಕೀಲರು, ಘಟನೆ ನಡೆದ ಸ್ಥಳ ತಿರುವಣ್ಣಾಮಲೈ ಆಗಿರುವುದರಿಂದ ವಿಚಾರಣೆ ವ್ಯಾಪ್ತಿ ಈ ನ್ಯಾಯಾಲಯಕ್ಕೆ ಬರುವುದಿಲ್ಲ. ಆದ್ದರಿಂದ ಪ್ರಕರಣವನ್ನು ವಜಾಗೊಳಿಸಬೇಕು ಎಂದು ವಕೀಲರು ಕೋರಿದ್ದರು.ಅಲ್ಲದೇ, ಹುಣ್ಣಿಮೆ ಸಮಯದಲ್ಲಿ ಜನಸಂದಣಿ ನಿಯಂತ್ರಿಸಲು ಸ್ಥಳೀಯ ಪೊಲೀಸರು ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಹೊರ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಈ ಬಗ್ಗೆ ಬಸ್‌ ಕಂಡಕ್ಟರ್ ದೂರುದಾರರಿಗೆ ಎಸ್‌ಎಂಎಸ್ ಕಳುಹಿಸಿದ್ದಾರೆ. ಅದರಂತೆ ಇತರೆ 23 ಪ್ರಯಾಣಿಕರು ಬಸ್‌ ಹತ್ತಿದ್ದರೂ, ದೂರುದಾರರು ಬಂದಿಲ್ಲ. ಇದು ಅವರದೇ ತಪ್ಪು ಎಂದು ವಾದಿಸಿದ್ದರು.
ಕೆಎಸ್ಆರ್‌ಟಿಸಿ ತನ್ನ ವಾದಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸಿಲ್ಲ ಎಂದು ಅಭಿಪ್ರಾಯಪಟ್ಟ ಕೋರ್ಟ್, ನಿಗಮದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಟ್ರಾಫಿಕ್ ಜನರಲ್ ಮ್ಯಾನೇಜರ್ ಐರಾವತ್ ಟಿಕೆಟ್‌ ಬುಕ್ಕಿಂಗಿಗೆ ಪಾವತಿಸಿದ್ದ 497 ರೂ. ಮತ್ತು ಪರ್ಯಾಯ ಬಸ್ ಪ್ರಯಾಣಕ್ಕಾಗಿ 131 ರೂ. ಮತ್ತು 69 ರೂ. ಮರುಪಾವತಿಸುವಂತೆ ಆದೇಶಿಸಿದೆ. ಅಲ್ಲದೇ, ಬೆಂಗಳೂರಿಗೆ ಹಿಂತಿರುಗಲು ಹಿರಿಯ ನಾಗರಿಕರು ತೊಂದರೆ ಎದುರಿಸಿದ್ದಕ್ಕೆ 1 ಸಾವಿರ ರೂಪಾಯಿ ಪರಿಹಾರವನ್ನು 1 ತಿಂಗಳಲ್ಲಿ ಪಾವತಿಸುವಂತೆ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments