Webdunia - Bharat's app for daily news and videos

Install App

ಕೊರೊನಾಗೆ ಮೊದಲ ಸಾವು ಕಂಡ ಊರಲ್ಲಿ 144 ಸೆಕ್ಷನ್ ಮುಂದುವರಿಕೆ

Webdunia
ಭಾನುವಾರ, 22 ಮಾರ್ಚ್ 2020 (16:14 IST)
ಕೊರೊನಾ ವೈರಸ್ ನಿಂದ ದೇಶದಲ್ಲಿಯೇ ಮೊದಲ ವ್ಯಕ್ತಿ ಮೃತಪಟ್ಟ ನಗರದಲ್ಲಿ 144 ಸೆಕ್ಷನ್ ಮತ್ತೆ ಮುಂದುವರಿಸಲಾಗಿದೆ. 

ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೆ ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆಯನ್ನು ಮಾರ್ಚ್ 25 ರ ರಾತ್ರಿ 8 ಗಂಟೆ ವರೆಗೆ ವಿಸ್ತರಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ಕೊರೋನಾ ಸೊಂಕಿನಿಂದ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ  ಕಲಬುರಗಿ ಜಿಲ್ಲೆಯಾದ್ಯಂತ ಮಾರ್ಚ್ 22ರ  ರಾತ್ರಿ 8 ಗಂಟೆ ವರೆಗೆ‌ ಈ ಹಿಂದೆ ನಿಷೇಧಾಜ್ಞೆ ಜಾರಿಗೊಳಿಸಿ ಡಿ.ಸಿ. ಅದೇಶ ಹೊರಡಿಸಿದ್ದರು. ಇದೀಗ ಪರಿಸ್ಥಿತಿಯ ಅಗತ್ಯತೆಯನ್ನು ಮನಗಂಡು ಜಿಲ್ಲಾಧಿಕಾರಿಗಳು ಮತ್ತೆ ಮೂರು ದಿನ ನಿಷೇಧಾಜ್ಞೆ ವಿಸ್ತರಿಸಿದ್ದಾರೆ.

ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗುಂಪು-ಗುಂಪಾಗಿ ಚಲಿಸುವುದು ಮತ್ತು ಅನಾವಶ್ಯಕವಾಗಿ ಸಂಚರಿಸುವಂತಿಲ್ಲ. ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಸಹ ಖರೀದಿಸುವ ಅಗತ್ಯವಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. ಅಗತ್ಯ ಸೇವೆಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಡಿ.ಸಿ. ಶರತ್ ಬಿ. ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments